ಕ್ರೈಂ ಸುದ್ದಿ:
ಗಾಂಜಾ ವಶ – ನಾಲ್ವರ ಬಂಧನ
ಗಾಂಜಾ ವಶ – ನಾಲ್ವರ ಬಂಧನ ನ್ಯಾಮತಿ – ಹೊನ್ನಾಳಿ – ಶಿವಮೊಗ್ಗ ರಸ್ತೆ ಬದಿಯ ಕಲ್ಪಿಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ನ್ಯಾಮತಿ ಠಾಣೆಯ ಪೊಲೀಸರು ಬಂಧಿಸಿ ಅಂದಾಜು 13.20 ಮೌಲ್ಯದ 3.1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅರ್ಬಾಜ್ ಖಾನ್ (27), ಮಹಮ್ಮದ್ ಹುಸೈನ್ ರಝಾ (23), ಜಾಫರ್ ಸಾದಿಕ್ (22), ಮಹಮ್ಮದ್ ರೋಹೀತ್ (31) ಹಾಗೂ ನ್ಯಾಮತಿ ತಾಲ್ಲೂಕಿನ ಹೊಸಜೋಗ ಗ್ರಾಮದ ಶಂಕರನಾಯ್ಕ (29) ಬಂಧಿತರು….
ಕೌಟುಂಬಿಕ ಕಲಹ ಹಿನ್ನಲೆ ವಿಷ ಸೇವಿಸಿ ಗೃಹಿಣಿ ಸಾವು – ಪತಿ , ಮಾವನ ಬಂಧನ | ಅತ್ತೆ , ನಾದಿನಿ ಪರಾರಿ
ಕೌಟುಂಬಿಕ ಕಲಹ ಹಿನ್ನಲೆ ವಿಷ ಸೇವಿಸಿ ಗೃಹಿಣಿ ಸಾವು – ಪತಿ , ಮಾವನ ಬಂಧನ , ಅತ್ತೆ , ನಾದಿನಿ ಪರಾರಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮೃತಳನ್ನು ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪನವರ ಮಗಳು ಪೂಜಾ (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬಾತನೊಂದಿಗೆ ಪೂಜಾಳ ವಿವಾಹವಾಗಿತ್ತು….
ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ
ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ವೇಗವಾಗಿ ಬಂದ ಲಾರಿ ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪರಿಣಾಮ ಬೈಕ್ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ…
ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ
ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ ಶಿವಮೊಗ್ಗ : ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್ಐ ವಿನಾಯಕ ಅವರ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ, ಕಪ್ಪು ಆಮೆಯನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ನಗರದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಇಟ್ಟುಕೊಂಡಿದ್ದ ಮಹಮ್ಮದ್ ಸಮೀಯುಲ್ಲಾ ಬಿನ್ ಹಮೀದ್ ಎಂಬುವವರನ್ನು ಬಂಧಿಸಿದ್ದು,…
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…
RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ
RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್ಪೇಟೆ: ಪಟ್ಟಣದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…
“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!”
“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!” ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ‘ಗುಂಡಾಗಿರಿ’ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ತಿಂಗಳ ಕಂತು ಬಾಕಿ ಇಟ್ಟ ಕಾರಣಕ್ಕೆ ರೈತನ ಜೀವಾಳವಾದ ಜಾನುವಾರುಗಳನ್ನು ಬಲಪ್ರಯೋಗದಿಂದ ಎಳೆದೊಯ್ದಿರುವ ಗೃಹಹಲ್ಲೆಯಂತ ಘಟನೆ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ಕೃಷಿಕರು 2 ಲಕ್ಷ ರೂಪಾಯಿ ಲೋನ್ ಪಡೆದಿದ್ದರು. ನಿಯಮಿತವಾಗಿ ತಿಂಗಳಿಗೆ ₹9,000 ಕಂತು ಪಾವತಿಸುತ್ತಿದ್ದರೂ, ಹಾಲಿಡುವ ಹಸು ಅಕಾಲಿಕವಾಗಿ ಸಾವನ್ನಪ್ಪಿದ…
RIPPONPETE | ಚಾಣಾಕ್ಯ ಬಾರ್ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ ಮೇಲೆ ಹಲ್ಲೆ
RIPPONPETE | ಚಾಣಾಕ್ಯ ಬಾರ್ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ ಮೇಲೆ ಹಲ್ಲೆ ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…
ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್ಪೇಟೆ ಪೊಲೀಸರ ಬಲೆಗೆ
ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್ಪೇಟೆ ಪೊಲೀಸರ ಬಲೆಗೆ ರಿಪ್ಪನ್ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ನಡೆದ ಕೇಬಲ್ ಕಳವು ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್ಪೇಟೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ. ಅರಸಾಳು ಗ್ರಾಮದ ಮಂಜ ಮತ್ತು ನಾಗ ಬಂಧಿತ ಆರೋಪಿಗಳಾಗಿದ್ದಾರೆ. ಅರಸಾಳು ಗ್ರಾಮದಲ್ಲಿ ಹೊಳೆ ಬದಿಯಲ್ಲಿ ಮೋಟಾರ್ ಗಳಿಗೆ ಅಳವಡಿಸುತಿದ್ದ ಕೇಬಲ್ ಗಳನ್ನು ಕದ್ದು ಮಾರುತಿದ್ದ ಆರೋಪಿಗಳು ಅರಸಾಳು ಗ್ರಾಮದಲ್ಲಿ ಸುತ್ತಾಡುತ್ತಿದ್ದ ಕುರಿತು ಬಂದ ಗುಪ್ತ ಮಾಹಿತಿಯ ಆಧಾರದ…
HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ
HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್ಆ್ಯಪ್ ಗುಂಪಿಗೆ ಸೇರುವ ಲಿಂಕ್ನ್ನು…