Headlines

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ-ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ -ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್ ಆರೋಪಿಗಳೊಬ್ಬರು ಜೀಪ್‌ನ ಟಯರ್‌ ಬಿಚ್ಚುವ ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆದಿದ್ದು, ಈ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ… ಹೊಸನಗರ, ಜುಲೈ 22: ಮದ್ಯದ ವಿಚಾರವಾಗಿ ತಕರಾರು ಉಂಟಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ನಡೆದಿದೆ….

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More