Headlines

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ ಶಿವಮೊಗ್ಗ :   ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು ೪೩ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ ೨೧,೮೪,೬೬೦ ರೂಗಳ ಒಟ್ಟು ೫೬ ಕೆಜಿ ೭೪೦  ಗ್ರಾಂ ತೂಕದ ಗಾಂಜಾವನ್ನು ಗುರುವಾರ ನಾಶಪಡಿಸಲಾಯಿತು. ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More