Headlines

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…

Read More

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್‌ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು  ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್‌ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು…

Read More

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ  ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…

Read More

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ  ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್‌ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ…

Read More

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More