ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ  ಸಾವು ಕಂಡಿದ್ದಾನೆ. ಸೀಗೆಹಟ್ಟಿಯ ಅಡುಗೆ ಕಂಟ್ರ್ಯಾಕ್ಟರ್  ಕಾಂತರಾಜ್ ನವರ ಪುತ್ರ ಉಲ್ಲಾಸ್ (21) ಸಾವು ಕಂಡ ದುರ್ದೈವಿಯಾಗಿದ್ದಾನೆ.  ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಉಲ್ಲಾಸ್ (20)  ಜೆಎನ್ ಎನ್…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು. ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು….

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More