RIPPONPETE | ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ

ಕೊಡಚಾದ್ರಿ ಮಹಿಳಾ ಸೊಸೈಟಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ – ವ್ಯವಸ್ಥಾಪಕಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದಲ್ಲಿ ರೂ. 31,59,164/-ರೂ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸೊಸೈಟಿಯ ವ್ಯವಸ್ಥಾಪಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ನಿವಾಸಿ ಪವಿತ್ರಾ ಎನ್ ಬಂಧಿತ ಆರೋಪಿಯಾಗಿದ್ದಾರೆ. ಕೊಡಚಾದ್ರಿ ಮಹಿಳಾ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಮುಖ್ಯ ಶಾಖೆ ತೀರ್ಥಹಳ್ಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿತಾ ರವರು ದಾಖಲಿಸಿದ…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ  ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.  ಆಕೆಯ ಫೋಟೋಗಳನ್ನು…

Read More

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read More

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More