ಕ್ರೈಂ ಸುದ್ದಿ:
Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು
Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…
ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft
ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್ನ ತಿರುಪಳಯ್ಯನ ಕೇರಿಯ ಸಂಪತ್ ಜ್ಯುವೆಲರಿ ಶಾಪ್ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…
ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident
ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…
ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ | Crime news
ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ ಹಾನಿ ಮಾಡಿದ್ದಾರೆ. ಕಾರಗಳ…
Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು
Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು…
Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ
Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್ರಾಜ್ (24), ಹಣಮಂತ (24), ರಾಕೇಶ್ (20), ಅಭಿಷೇಕ್ (20), ಶಿವಕುಮಾರ್ (23) ಬಂಧಿತರು. ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್ ಮತ್ತು ಸೊರಬ…
Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ
Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ ಬಂಗಾರ ಪಾಲಿಶ್ ಹಾಕಿಕೊಡುತ್ತೇವೆ ಎಂದು ಮಹಿಳೆಯರನ್ನು ಯಾಮಾರಿಸುವ ಗ್ಯಾಂಗ್ವೊಂದನ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕುತೂಹಲ ಮೂಡಿಸಿದ ಪ್ರಕರಣದಲ್ಲಿ ಅಜ್ಜಿಗೆ ನಕಲಿ ಚಿನ್ನದ ನಾಣ್ಯಕೊಟ್ಟು ಆಕೆಯ ಬೆಂಡೋಲೆಯನ್ನು ಪಾಲೀಶ್ ನೆಪದಲ್ಲಿ ಕದ್ದೊಯ್ದಿದ್ದ ಆರೋಪದ ಅಡಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ …
Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು
Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…
ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news
ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…
ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News
ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News ಆನಂದಪುರ : ಇಲ್ಲಿನ ಹೆದ್ದಾರಿಯಲ್ಲೆ ಯುವಕನೊಬ್ಬ ಲಾಂಗ್ ಝಳಪಿಸಿ ಹೆದರಿಸಿದ್ದು ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ. ಆನಂದಪುರದ ಹೆದ್ದಾರಿಯಲ್ಲಿ ಯುವಕನೊಬ್ಬ ಲಾಂಗ್ ಹಿಡಿದು ರೋಡಲ್ಲಿ ಬೀಸಿದ್ದಾನೆ. ವೆಹಿಕಲ್ಗಳ ಮೇಲೆ ಆತ ಲಾಂಗ್ ಬೀಸಿದ್ದಾನೆ ಎನ್ನಲಾಗಿದೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಈ ಹೈಡ್ರಾಮಾ ನಡೆದಿದೆ ಎನ್ನಲಾಗುತಿದ್ದು,ಇದರಿಂದ ರಸ್ತೆಯಲ್ಲಿ ಪ್ರಯಾಣಿಸುತಿದ್ದ ವಾಹನ ಮಾಲೀಕರು ಕೆಲಕಾಲ ಆತಂಕಗೊಂಡಿದ್ದಾರೆ….