
ಜಿಲ್ಲಾ ಸುದ್ದಿ:

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ
RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ
ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಿಪ್ಪನ್ಪೇಟೆ ಸಮೀಪದ ಮಳವಳ್ಳಿ ಗ್ರಾಮದ ವಿಜಯ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆನ್ಲೈನ್ ನಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜಯ್ ಮಳವಳ್ಳಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಸ್ವಗೃಹದಲ್ಲಿ ಅಭಿನಂದಿಸಿ ಶುಭಾಶಯ ಕೋರಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು…

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿಗೌಡ ಆರೋಪ
ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿಗೌಡ ಆರೋಪ ಶಿವಮೊಗ್ಗ : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್ಎ ಮನೆಗೆ ಹೋಗಿ ಬನ್ನಿ…

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ
ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ
ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ: ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ
ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಈ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಮಾನವೀಯ ಕೆಲಸವೊಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ…

ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿಗಳು
ತಾಳಿ ಕಟ್ಟಿ ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿ ಶಿವಮೊಗ್ಗ : ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳು ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿ ಜೀವನ ಸಾರ್ಥಕವೆನಿಸಿಕೊಂಡ ಕ್ಷಣ ಇಲ್ಲಿನ ಗುಡ್ಡೇಕಲ್ ಗುಡ್ಡೇಕಲ್ ಸಮುದಾಯ ಭವನದಲ್ಲಿ ಸೋಮವರ ನಡೆಯಿತು. ಬೊಮ್ಮನಕಟ್ಟೆ ವಾಸಿ ಯಶವಂತ್ ಅವರ ವಿವಾಹವು ತನುಜಾ ಜೊತೆ ಶಿವಮೊಗ್ಗದ ಈ ಸಂದರ್ಭದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಟ್ರಾಫಿಕ್ ಹೆಡ್ಕಾನ್ಸ್ಟೇಬಲ್ ಹಾಲೇಶಪ್ಪ ರಕ್ತದಾನ…

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ
RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು
ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ : ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್ ನಲ್ಲಿ ಚರ್ಚ್ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ ಹೊಡೆದಾಟ ನಡೆದಿದೆ. ಚರ್ಚ್ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು. ನಡುವೆ ಚರ್ಚ್ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ
ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….