ಜಿಲ್ಲಾ ಸುದ್ದಿ:
ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ
ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ ಶಿವಮೊಗ್ಗ: ಧರ್ಮಕ್ಕಿಂತ ಕಾನೂನೇ ಮುಖ್ಯ. ಶಾಂತಿಗಾಗಿ ಹೋರಾಟ ಮಾಡಬೇಕೆ ಹೊರತು ನಗರ ವಾಸಿಗಳ ಮನವನ್ನು ಕದಡುವ ಕೆಲಸವನ್ನಲ್ಲ. ಆರ್ ಎಂಲ್ ನಗರದಲ್ಲಿ ನಡೆದ ಹಲ್ಲೆಯನ್ನು ಕೋಮುಬಣ್ಣಕ್ಕೆ ತಿರುಗಿಸಿ, ಊರಲ್ಲೆಲ್ಲ ಟಾಂ ಟಾಂ ಹೊಡೆದು ಲಾಭ ಪಡೆಯಲು ಮುಂದಾದ ಶಾಸಕರು ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಹೀಗೆ ಮಾಡುವ ಮುನ್ನ ತಾಳ್ಮೆ ವಹಿಸಬೇಕಿತ್ತೆಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ….
ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು
ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್ ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…
ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ
ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ ಸ್ನೇಹ ಸಮ್ಮಿಲನ ‘ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಮೃತ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಚಿನ್ಗೌಡ ತಿಳಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ…
ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ
ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…
ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ
ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…
ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ
ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್ 20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮವನ್ನು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್. ಎಂ. ಮಂಜುನಾಥ್…
ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ
ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ…
ಕಲಗೋಡು ರತ್ನಾಕರ್ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ
ಕಲಗೋಡು ರತ್ನಾಕರ್ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…
ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ
ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜು…
ರಿಪ್ಪನ್ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ
ರಿಪ್ಪನ್ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…