Headlines

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ  ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ  “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು.. ಈ…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More