ಜಿಲ್ಲಾ ಸುದ್ದಿ:
ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ
ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…
HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು
ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ: ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಶುಕ್ರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…
ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು
ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…
Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…
ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ
Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?
ರಿಪ್ಪನ್ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…
ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!
ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ…
ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ – ಶಾಸಕ ಬೇಳೂರು ಸವಾಲ್
ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹೈಕೋರ್ಟ್ ಜಡ್ಜ್ ಮುಂದೆ ಶಾಸಕರ ವಿರುದ್ದ ಆರೋಪ ಮಾಡಿದ ಮೆಸ್ಕಾಂ ಇಂಜಿನಿಯರ್ ಇತ್ತೀಚೆಗೆ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಮೆಸ್ಕಾಂ ಇಂಜಿನಿಯರ್ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು. ಶಿವಮೊಗ್ಗ ಜಿಲ್ಲೆಯ…
ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python
ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…
Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ
Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ ರಿಪ್ಪನ್ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ…