Headlines

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More