Headlines

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದಲ್ಲಿ ಮೃತರ ಮನೆಗಳಿಗೆ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತ ಪಟ್ಟ ಶರಣಪ್ಪ ನವರ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ನಾಳೆ ಭದ್ರಾವತಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಬೃಹತ್ ಕೈಗಾರಿಗೆ ಮತ್ತು ಉಕ್ಕು ಸಚಿವ ಹೆಚ್ ಡಿ.ಕುಮಾರಸ್ವಾಮಿ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಗೆ ನಾಳೆ ಭೇಟಿ ನೀಡಲಿದ್ದಾರೆ.ಕೇಂದ್ರದ ಸಚಿವರಾಗಿ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸುತ್ತಿದ್ದು ವಿಐಎಸ್ ಎಲ್ ಕಾರ್ಮಿಕರ ಮೊಗದಲ್ಲಿ ಖುಷಿ ತಂದಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ದೆಹಲಿ ಬಿಡುವ ಸಚಿವ ಕುಮಾರ ಸ್ವಾಮಿ ಅವರು ಮಧ್ಯಾಹ್ನ 12-15 ಕ್ಕೆ ಶಿವಮೊಗ್ಗ ಏರ್ ಪೋರ್ಟ್ ತಲುಪಲಿದ್ದಾರೆ. ಶಿವಮೊಗ್ಗ ಏರ್‌ ಪೋರ್ಟ್…

Read More

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read More

Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್‌ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…

Read More

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read More

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More