
ಜಿಲ್ಲಾ ಸುದ್ದಿ:

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ
HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು
ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ನ ಪ್ರೌಢಶಾಲಾ ವಿಭಾಗದ 2024-25…

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ
20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ
ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

ರಿಪ್ಪನ್ಪೇಟೆ : ಹಿರಿಯ ಸಾಹಿತಿ ನಾ ಡಿಸೋಜ ಅಂತಿಮ ದರ್ಶನ ಪಡೆದ ಅಭಿಮಾನಿಗಳು
ರಿಪ್ಪನ್ಪೇಟೆ : ಭಾನುವಾರ ಅಸ್ತಂಗತರಾದ ನಾಡಿನ ಹೆಸರಾಂತ ಸಾಹಿತಿ ,ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ಪಾರ್ಥಿವ ಶರೀರವನ್ನು ಪಟ್ಟಣದ ವಿನಾಯಕ ವೃತ್ತದಲ್ಲಿ ಅಭಿಮಾನಿಗಳು, ಹಿತೈಷಿಗಳು, ಅಂತಿಮ ದರ್ಶನ ಪಡೆದರು. ಮಂಗಳೂರಿನಿಂದ ಸಾಗರಕ್ಕೆ ಪ್ರಾರ್ಥೀವ ಶರೀರ ತೆರಳುತಿದ್ದ ಸಂಧರ್ಭದಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ,ಅಭಿಮಾನಿಗಳು ಹಾಗೂ ಹಿತೈಶಿಗಳು ನಾಡಿನ ಹೆಸರಾಂತ ಸಾಹಿತಿಯ ಅಂತಿಮ ದರ್ಶನ ಪಡೆದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹ ಅ ಪಾಟೀಲ್ ನಾ ಡಿಸೋಜ ಹಾಗೂ ರಿಪ್ಪನ್ಪೇಟೆ ಪಟ್ಟಣಕ್ಕೂ ಅವಿನಾಭಾವ…

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ
ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು
ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ
RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ
ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ HOSANAGARA | ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರನ್ನು ಶೀಘ್ರವಾಗಿ ಬೇರೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಎಂ ಗುಡ್ಡೆಕೊಪ್ಪ ಗ್ರಾಪಂ ಅಧ್ಯಕ್ಷ ಪ್ರವೀಣ್ ಜಿ ಎನ್ ತಾಪಂ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಿಡಿಓ ರವಿ ಎಸ್ ರವರನ್ನು ಕೂಡಲೆ ವರ್ಗಾವಣೆಗೊಳಿಸಿ ಇಲ್ಲವಾದಲ್ಲಿ ದಿನಾಂಕ 7-1-2025 ರಂದು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು…

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ
Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್ಪೇಟೆಯ ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…