Headlines

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು

ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು.  ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…

Read More

hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

“ಆರೋಗ್ಯದಾಯಕ ಪರಿಸರ ಪಸರಿಸಲಿ” –  ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.  ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Read More

ದೇಶದ ಹಿತದೃಷ್ಟಿಯಿಂದ ಮೋದಿಗೆ ಮತ ನೀಡಬೇಕು – ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಪ್ರಸಕ್ತ ಕಾಲದಲ್ಲಿ ದೇಶದಲ್ಲಿ ಮೋದಿಯಿಂದ ಅಭಿವೃದ್ದಿಯ ಪರ್ವ ನಡೆಯುತಿದ್ದು ಮತದಾರರು ದೇಶದ ಹಿತದೃಷ್ಠಿಯಿಂದ ಆತ್ಮಾವಲೋಕನ ಮಾಡಿಕೊಂಡು ಮೋದಿಗೆ ಮತ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯನಾಗಿ ಆಯ್ಕೆ ಆಗಿದ್ದು ಜನಮೆಚ್ಚುವ ಆಭಿವೃದ್ದಿ ಕೆಲಸಗಳಿಗಾಗಿ ಸರ್ಕಾರದ ಹಿರಿಯರಿಂದಲೂ ಪ್ರಶಂಸೆಯನ್ನು ಪಡೆದುಕೊಂಡಿದ್ದೇನೆ. ಕ್ಷೇತ್ರದಾದ್ಯಂತ ಸಾಕಷ್ಟು ಜನಪರವಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆನುದಾನವನ್ನು…

Read More

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ !!! | Yesu Prakash

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ ! ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ…

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

Hombuja | ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ

ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ ಅತಿಶಯ ಶ್ರೀಕ್ಷೇತ್ರ ಹೊಂಬುಜ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪಾದಾರ್ಪಣೆ ಮಾಡಿದರು. ಸಾಲಾಂಕೃತ ಮೆರವಣಿಗೆಯಲ್ಲಿ ಮುನಿಶ್ರೀಯವರನ್ನು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಪರಂಪರಾಗತವಾಗಿ ಸ್ವಾಗತಿಸಿ, ಭರಮಾಡಿಕೊಂಡರು. ಜಿನಮಂದಿರಗಳ ದರ್ಶನ ಪಡೆದ ಮುನಿಶ್ರೀಯವರು ವಾರ್ಷಿಕ ರಥಯಾತ್ರಾ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ನೀಡಲಿರುವರು….

Read More