ಜಿಲ್ಲಾ ಸುದ್ದಿ:
ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli
ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…
81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…
ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ! ಎಲ್ಲೆಲ್ಲಿ ಗೊತ್ತಾ..?? ಈ ಸುದ್ದಿ ನೋಡಿ
ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ 09-30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ…
Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ
ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್ಪೇಟೆ : ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…
ರಿಪ್ಪನ್ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK
ರಿಪ್ಪನ್ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK ರಿಪ್ಪನ್ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ವಿನಾಯಕ ವೃತ್ತದಲ್ಲಿ ನಾಗರೀಕರು ಅದ್ದೂರಿಯಾಗಿ ಸ್ವಾಗತಿಸಿದರು. ಖಾಸಗಿ ಕಾರ್ಯಕ್ರಮದ ಅಂಗವಾಗಿ ಸಾಗರಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಪಟ್ಟಣದ ನಾಗರೀಕರು ಹಾರ ತುರಾಯಿಗಳ ಮೂಲಕ ಅದ್ದೂರಿ ಸ್ವಾಗತ ಕೋರಿದರು. ಈ ಸಂಧರ್ಭದಲ್ಲಿ ನಾಗರೀಕರೊಂದಿಗೆ ಸರಳ ಸಜ್ಜನಿಕೆಯಿಂದ ಮಾತನಾಡಿದ ಅವರು ವಿಧಾನಸಭಾ ಕಲಾಪ ವೀಕ್ಷಣೆಗೆ ಆಗಮಿಸಿ…
ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri
ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…
ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru
ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ…
6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ
6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…
ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara
ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…
ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite
ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…