ಜಿಲ್ಲಾ ಸುದ್ದಿ:
Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…
Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ
Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ ರಿಪ್ಪನ್ಪೇಟೆ : ಮುಂದಿನ ತಿಂಗಳು ಥೈಯ್ಲಾಂಡ್ ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ SQAY ಪಂದ್ಯಾವಳಿಗೆ ಪಟ್ಟಣದ ನಿಯಾಜ್ ನಾಸಿರ್ ಆಯ್ಕೆಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಗಳ ಪುತ್ರನಾದ ನಿಯಾಜ್ ಕೋಣಂದೂರು NRS ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಾಂಗ ಮಾಡುತಿದ್ದಾನೆ. 1111111 ಜನವರಿ 18 ರಿಂದ 20 ರವರೆಗೆ ಮಹರಾಷ್ಟ್ರ ರಾಜ್ಯದ ಶಿರಡಿಯಲ್ಲಿ ನಡೆದ SQAY MARTIAL…
Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ
Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…
Ripponpete | ರಿಪ್ಪನ್ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ
ರಿಪ್ಪನ್ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…
Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್
Ripponpete | ವಿಕಲ ಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…
Hosanagara | ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ ಆಯ್ಕೆ
ಹೊಸನಗರ ತಾಲೂಕು ಕಾಂಗ್ರೆಸ್ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ದೇರಿ ಆಯ್ಕೆ ರಿಪ್ಪನ್ ಪೇಟೆ : ಹೊಸನಗರ ತಾಲೂಕು ಕಾಂಗ್ರೆಸ್ ಓ ಬಿ ಸಿ ಘಟಕದ ತಾಲೂಕು ಅಧ್ಯಕ್ಷರಾಗಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಆಯ್ಕೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಒಬಿಸಿ ಜಿಲ್ಲಾ ಅಧ್ಯಕ್ಷರಾದ ರಮೇಶ್ ಇಕ್ಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಪ್ರವೀಣ್ ಲಕ್ಷ್ಮಿಕಾಂತ್ ಅಡ್ಡೇರಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ NSUI ಸಾಗರ ಕ್ಷೇತ್ರ ಘಟಕದ ಅಧ್ಯಕ್ಷರಾಗಿ ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ…
ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university
ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ ತೆಂಗು ಬೆಳೆಯಲ್ಲಿ ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…
ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ | Madhu Bangarappa should stop being a bully
ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಶಿವಮೊಗ್ಗ(shivamogga)ದಲ್ಲಿ…
SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ
SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…
HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?
HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…