ಜಿಲ್ಲಾ ಸುದ್ದಿ:
Ripponpete | ಪುನೀತ್ ರಾಜ್ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ವೈರಲ್ – ಹಳೆಯ ಘಟನೆಯನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳು
Ripponpete | ಪುನೀತ್ ರಾಜ್ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು – ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು…
ಪಲ್ಸರ್ ಬೈಕ್ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff
ಪಲ್ಸರ್ ಬೈಕ್ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್ ಬೈಕ್(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್ ಆಫ್(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….
Shivamogga | ಜ.12 ಮತ್ತು 13ರಂದು ಮರ್ಕಜ್ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ
Shivamogga | ಜ.12 ಮತ್ತು 13ರಂದು ಮರ್ಕಜ್ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…
Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ
ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು. ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…
Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ
Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…
Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು
ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ ರಿಪ್ಪನ್ಪೇಟೆ : ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…
Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ
Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…
ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga
ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…
Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ
Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…