ಜಿಲ್ಲಾ ಸುದ್ದಿ:
Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ರಿಪ್ಪನ್ಪೇಟೆ : ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…
Ripponpete | ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ
ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಚಿಗುರು ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ, ಇಂದು ಗವಟೂರು ಗ್ರಾಮದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕೃಷಿ ಅರಣ್ಯ ಎಂಬ ವಿಷಯದ ಮೇಲೆ ಗುಂಪು ಚರ್ಚೆಯನ್ನು ನಡೆಸಿದರು. ಈ ಗುಂಪು ಚರ್ಚೆಯಲ್ಲಿ ‘ಕೃಷಿ ಅರಣ್ಯವು ಒಂದು ಭೂ ಬಳಕೆ ಪದ್ಧತಿಯಾಗಿದೆ, ಕೃಷಿ…
ರಿಪ್ಪನ್ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB
ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆ;-ರಿಪ್ಪನ್ಪೇಟೆ –ಆನಂದಪುರ ಪೊಲೀಸ್ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…
Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ
Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…
Hosanagara | ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ
Hosanagara | ತಾಲೂಕ್ ಬಿಜೆ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ ಹೊಸನಗರ ತಾಲೂಕಿನ ಬಿಜೆಪಿ ತಾಲೂಕ್ ಅಧ್ಯಕ್ಷರನ್ನಾಗಿ ಮತ್ತಿಮನೆ ಸುಬ್ರಹ್ಮಣ್ಯ ರವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಾಗಾರ್ಜುನಸ್ವಾಮಿ ,ಸತೀಶ್ ಕಾಲಸಸಿ ರವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಎದುರಾಗಿತ್ತು ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ರಿಪ್ಪನ್ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ಸುರೇಶ್ ಸ್ವಾಮಿರಾವ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದವು. ಇಂದು ಜಿಲ್ಲೆಯ…
Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಇ ಗವರ್ನೆನ್ಸ್ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್ನ…
Ripponpete | ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು
ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್ಪೇಟೆಯ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಪಟ್ಟಣದ ನಾಗರೀಕರ ಬಹುದಿನಗಳ ಬೇಡಿಕೆಯ ಚತುಷ್ಫಥ ರಸ್ತೆ…
Ripponpete| “ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು
“ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆ;-ಕೂಲಿ ಕಾರ್ಮಿಕರ ಮತ್ತು ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು,ಉನ್ನತ ವ್ಯಾಸಂಗಮಾಡಲು ಉತ್ತಮ ಅವಕಾಶಗಳಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಶನಿವಾರ ಪಟ್ಟಣದಸರ್ಕಾರಿ ಪದವಿ ಪೂರ್ವ ಕಾಲೇಜ್ನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಿಂದೆ ಶ್ರೀಮಂತರ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದರು ಅದರೆ ಕೂಲಿಕಾರ್ಮಿಕರ ಮಕ್ಕಳು ಇದರಿಂದ ವಂಚಿತರಾಗುವ ಕಾಲವೊಂದು ಇತ್ತು ಈಗಿನ ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ…
Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್ಐ ಪ್ರವೀಣ್ ಎಸ್ ಪಿ
ರಿಪ್ಪನ್ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…
Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು
ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…