Headlines

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read More

Ripponpete | ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ : ಜನವರಿ 22 ಎಂದು ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತಕ್ಕೆ ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆ ಬರುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ದೇವಸ್ಥಾನದಲ್ಲಿಟ್ಟು ಪೂಜೆ ಸಲ್ಲಿಸಿದರು. ಎನ್.ಸತೀಶ್ ಮಂತ್ರಾಕ್ಷತೆಯ ಕೊಡಪಾನವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,…

Read More

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More