ಜಿಲ್ಲಾ ಸುದ್ದಿ:
Ripponpet | ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಕೆ
ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಎಸ್ ಪಿ ಗೆ ದೂರು ಸಲ್ಲಿಕೆ ರಿಪ್ಪನ್ಪೇಟೆ : ಪಟ್ಟಣದ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ರಮೇಶ್ (ಫ್ಯಾನ್ಸಿ ರಮೇಶ್) ತಮಗೆ ಜೀವ ಬೆದರಿಕೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರೀಕಾ ಹೇಳಿಕೆ ನೀಡಿರುವ ರಮೇಶ್ ಪಟ್ಟಣದ ಕೆಲವು ಖಾಸಗಿ ಲೇಔಟ್ ನಲ್ಲಿ ಕಾನೂನುಬಾಹಿರವಾಗಿ ಲೇಔಟ್ ನಿರ್ಮಾಣ ಮಾಡುತಿದ್ದಾರೆ ಎಂದು ಸಾಮಾಜಿಕ ಕಳಕಳಿಯಿಂದ ಈಗಾಗಲೇ ಲೇಔಟ್…
Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು
ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…
ಮಳಲಿ ಮಠದಲ್ಲಿ ಲೋಕಕಲ್ಯಾಣಾರ್ಥ ಇಷ್ಟಲಿಂಗ ಕಾರ್ತಿಕ ದೀಪೋತ್ಸವ ಧರ್ಮಸಮಾರಂಭ| malali matt
ಮಳಲಿಮಠದಲ್ಲಿ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ರಿಪ್ಪನ್ಪೇಟೆ:-ಸಮೀಪದ ಮಳಲಿ ಮಠದಲ್ಲಿ ನವಂಬರ 26 ರಂದು ಸಂಜೆ 4 ಗಂಟೆಗೆ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭವನ್ನು ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮಿಜಿ ತಿಳಿಸಿದರು. ರಿಪ್ಪನ್ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಕಾರ್ತೀಕ ದೀಪೋತ್ಸವ ಸಮಾರಂಭವನ್ನು ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.ಸಮಾರಂಭದ ಆಧ್ಯಕ್ಷತೆಯನ್ನು ಮಳಲಿಮಠದ…
Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ
Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…
Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ
ರಿಪ್ಪನ್ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್ಪೇಟೆಯ ಸಮೀಪದ…
Ripponpet | ಮುಸ್ಲಿಂ ಯುವಕ ಮಾಲೀಕತ್ವದ ಅಂಗಡಿಯಲ್ಲಿ ಲಕ್ಷ್ಮಿಪೂಜೆ , ಧರ್ಮಗುರುಗಳಿಂದ ಪ್ರಾರ್ಥನೆ – ಭಾವೈಕ್ಯತೆಯ ಸಂದೇಶ ಸಾರಿದ ಯುವಕ
ಮುಸ್ಲಿಂ ಯುವಕನಿಂದ ಲಕ್ಷ್ಮಿಪೂಜೆ – ಭಾವೈಕ್ಯತೆಯ ಸಂದೇಶ ನೀಡಿದ ಯುವಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯಲ್ಲಿ ಭಾನುವಾರ ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನೆರೆವೇರಿಸಿರುವ ಘಟನೆ ನಡೆದಿದೆ. ಪಟ್ಟಣದ ಸಮೀಪದ ಅರಸಾಳು ಮೂಲದ ತನ್ವೀರ್ ಎಂಬ ಯುವಕನು ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿರುವ ಜೊಹರಾ ಕಾಂಪ್ಲೆಕ್ಸ್ ನಲ್ಲಿ “ತನ್ವಿ ಮೊಬೈಲ್ ವರ್ಡ್” ಎಂಬ ಅಂಗಡಿ ತೆರೆದಿದ್ದಾರೆ. ಪ್ರತೀ ವರ್ಷ ತಮ್ಮ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು…
Ripponpet | ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿ ಸಂಭ್ರಮಾಚರಣೆ
“ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿ ಸಂಭ್ರಮಾಚರಣೆ’’ ರಿಪ್ಪನ್ಪೇಟೆ;- ನರಕ ಚತುರ್ದಶಿಯ ಅಂಗವಾಗಿ ಹೊಸನಗರ ತಾಲೂಕಿನ ವಿವಿಧಡೆ ಯಲ್ಲಿ ನಾಗರಿಕರು ಭಾನುವಾರ ಶ್ರದ್ಧಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿಯನ್ನು ಸಂಭ್ರಮದಿಂದ ಆಚರಿಸಿದರು. ಮಹಿಳೆಯರು ಮನೆಯ ಬಳಿಯಲ್ಲಿ ತೆರೆದ ಬಾವಿಯ ಸುತ್ತ ಸಗಣಿ ನೀರಿನಿಂದ ಶುದ್ದಿಕರಿಸಿ ಮಾವಿನ ತೋರಣ ಮತ್ತು ಜೇಡಿ ಕೆಮ್ಮಣ್ಣು ರಂಗೋಲಿಗಳಿಂದ ಶೃಂಗರಿಸಿ ಮುಂಜಾನೆ ಪೂಜೆಗೆ ಅಣಿಗೊಳಿಸಿಕೊಂಡು ಮುಂಜಾವಿನಲ್ಲಿ ಮುತ್ತೈದೆಯರು ಮಣ್ಣಿನ ಕುಂಭದೊಂದಿಗೆ ಪೂಜಾ ಸಾಮಗ್ರಿಯನ್ನು ಹಿಡಿದುಕೊಂಡು ಬಂದು ಗಂಗಾಮಾತೆಯನ್ನು ಪೂಜಿಸಿ ನೈವೇದ್ಯ ಮಾಡಿ ನೀರು…
Ripponpet | ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು
ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್ಪೇಟೆ : ಕೋಲಾರದಲ್ಲಿ ನ. 05 ರಿಂದ 07ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 12 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 14 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ…
Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ
Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…
ಅರಸಾಳು ಮಾಲ್ಗುಡಿಯಲ್ಲಿ ಆಟೋ ರಾಜ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ|shankarnag
ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ…