Headlines

ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು?

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ.   ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…

Read More

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು.  ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…

Read More

ನರಿಯನ್ನು ಭೇಟೆಯಾಡಿದ ಭಾರಿ ಗಾತ್ರದ ಹೆಬ್ಬಾವು|python

ನರಿಯನ್ನು ಹಿಡಿದ ಹೆಬ್ಬಾವು…!  ಸಾಗರ: ಹೆಬ್ಬಾವೊಂದು ನರಿಯನ್ನು ಹಿಡಿದ ಘಟನೆ ಐ. ಟಿ. ಐ ಕಾಲೇಜ್ ಹತ್ತಿರ ನಡೆದಿದ್ದು, ಹೆಬ್ಬಾವು ನರಿಯನ್ನು ಹಿಡಿದಿರುವ ದೃಶ್ಯ ವೈರಲಾಗಿದೆ. ತಾಲೂಕಿನ ರಾಮನಗರದ ಸಮೀಪದ ಐ. ಟಿ. ಐ ಕಾಲೇಜ್ ಸಮೀಪ ಹೆಬ್ಬಾವು ನರಿಯನ್ನು ಹಿಡಿದು ತನ್ನ ದೇಹದಿಂದ ಸುತ್ತಿಕೊಂಡು ಸಾಯಿಸಿದೆ. ಇದನ್ನು ಸ್ಥಳೀಯರು ನೋಡಿ ಸ್ನೇಕ್ ಅನುಪ ಅವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳ ಜೊತೆಗೆ ಆಗಮಿಸಿ ಹೆಬ್ಬಾವಿನ ರಕ್ಷಣೆ ಮಾಡಿದ್ದಾರೆ. ನಂತರ ಹೆಬ್ಬಾವನ್ನು ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.

Read More

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ  ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

Read More

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು|GKb

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ  ಪ್ಲೆಕ್ಸ್ ನ್ನು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ನಡೆದಿದ್ದೇನು..??? ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಆ ಹಿನ್ನಲೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಶುಭಾಶಯ ಕೋರಿ ಹಾಕಿದ್ದ ಪ್ಲೆಕ್ಸ್ ನ್ನು…

Read More

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಅವಿರೋಧ ಆಯ್ಕೆ|RMM

ಶಿವಮೊಗ್ಗ :  ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾದರು. ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು.  2021 ರಲ್ಲಿ ನಕಲಿ ಬಂಗಾರ ಪ್ರಕರಣದಲ್ಲಿ…

Read More