Headlines

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More

ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹೇಮಾವತಿ ಸತೀಶ್, ಉಪಾಧ್ಯಕ್ಷರಾಗಿ ಬೆಳ್ಳೂರು ತಿಮ್ಮಪ್ಪ ಆಯ್ಕೆ|belluru

ರಿಪ್ಪನ್‌ಪೇಟೆ : ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಹೇಮಾವತಿ ಸತೀಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬೆಳ್ಳೂರು ತಿಮ್ಮಪ್ಪ ಅವಿರೋಧವಾಗಿ ಆಯ್ಕೆಯಾದರು. ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ ನೀರಾವರಿ ಇಲಾಖೆಯ ಅಭಿಯಂತರರಾದ ಶಿವಕುಮಾರ್ ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಹಕರಿಸಿದರು. ಫಲಿತಾಂಶ ಘೋಷಣೆಯಾಗುತ್ತಿದ್ದಂತೆ…

Read More

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಉರುಳಿಗೆ ಸಿಲುಕಿ ಚಿರತೆ ಸಾವು|leopard

ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…

Read More

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ|thithahalli

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘ ತೀರ್ಥಹಳ್ಳಿಯ 2023-2028ರ ಅವಧಿಯ ಆಡಳಿತ ಮಂಡಳಿಯ ಚುನಾವಣೆಗೆ ಮಹಾಬಲೇಶ್ವರ ಹೆಗಡೆ ಟೀಂನ ಎಲ್ಲಾ 17 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಬಗ್ಗೆ ಸಹಕಾರ ವಿಭಾಗದ ಸಹಾಯಕ ನಿಬಂಧಕರಾದ ಎನ್.ಜಿ.ರುದ್ರಪ್ಪ, ಫಲಿತಾಂಶವನ್ನು ಘೋಷಣೆ ಮಾಡಿರುತ್ತಾರೆ. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು 1) ಮಹಾಬಲೇಶ್ವರ ಹೆಗಡೆ ತಿಮ್ಮಪ್ಪ 2)ತಿಮ್ಮಪ್ಪ ಎಂ ಎಸ್  3)ಪುಟ್ಟಪ್ಪ ಕೆ ವಿ 4)ಸತೀಶ್ ರಾಮಕೃಷ್ಣ ಹೆಗಡೆ 5)ಆನಂದ್ ಎಂ ಸಿ  6)ಶ್ರೀಕಾಂತ್…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More