ಜಿಲ್ಲಾ ಸುದ್ದಿ:
ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!|black magic
ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಶಿಕಾರಿಪುರದಲ್ಲಿ ವಾಮಾಚಾರದ ಸದ್ದು ಭಾರೀ ಕೇಳಿ ಬಂದಿತ್ತು. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸಂಸದ ಬಿವೈ ರಾಘವೇಂದ್ರರವರ ತೋಟದಲ್ಲಿ ಪುನಗು ಬೆಕ್ಕೊಂದು ಕೊಂದು ಹೂತು ಹಾಕಿ ವಾಮಾಚಾರ ಪ್ರಯೋಗ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೀಗ ಬಿವೈ ರಾಘವೇಂದ್ರ…
ಶಿವಮೊಗ್ಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕರಾಗಿ ಬಿ ಟಿ ಹಾಲೇಶ್ ಅಧಿಕಾರ ಸ್ವೀಕಾರ|district news
ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರನ್ನಾಗಿ ಬಿ ಟಿ ಹಾಲೇಶ್ ರವರನ್ನು ವರ್ಗಾವಣೆಗೊಳಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಮೂಲತಃ ಭದ್ರಾವತಿಯ ಬಿ ಟಿ ಹಾಲೇಶ್ ಸಾಗರ ವಿಭಾಗೀಯ ಕಚೇರಿಯಲ್ಲಿ ಕೆಲವು ವರ್ಷಗಳ ಕಾಲ ಸೇವೆ ಮಾಡಿರುತ್ತಾರೆ.ನಂತರ ಹಾಸನ ಜಿಲ್ಲೆಗೆ ಪದೋನ್ನತಿ ಹೊಂದಿ ಅಲ್ಲಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಸದರಿ ಶಿವಮೊಗ್ಗ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿ…
ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news
ರಿಪ್ಪನ್ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…
ಸಾಗರದಲ್ಲಿ ರೌಡಿಗಳ ಪರೇಡ್|sagara
ಸಾಗರದಲ್ಲಿ ರೌಡಿಗಳ ಪರೇಡ್|sagara ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಸಾಗರ ಉಪವಿಭಾಗದ ವ್ಯಾಪ್ತಿ ರೌಡಿ ಪರೇಡ್ ನಡೆಸಿದ್ಧಾರೆ. ಸಾಗರ ಟೌನ್ ಪೊಲೀಸ್ ಸ್ಟೇಷನ್ ಎದುರು ಪರೇಡ್ ನಡೆಸಿದ ಅವರು ರೌಡಿಸಂ ನಡೆಸುತ್ತಿರುವವರಿಗೆ ಎಚ್ಚರಿಕೆ ನೀಡಿ ಮಾತನಾಡಿದ ಅವರು, ನಿಮ್ಮ ಹೆಂಡತಿ ಮಕ್ಕಳ ಜೊತೆ ಉತ್ತವiವಾಗಿ ಸಂಸಾರಮಾಡಿಕೊಂಡು ಹೋಗಿ. ಇಲಾಖೆಯಿಂದ ನಿಮಗೆ ಯಾವುದೇ ತೊಂದರೆ ಬರುವುದಿಲ್ಲ. ಒಂದೊಮ್ಮೆ ನಿಮ್ಮ ಹಳೆ ಚಾಳಿಯನ್ನು ಪುನರಾರಂಭಿಸಿದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದರು. ಮಾದಕ ವಸ್ತು…
ನಾಳೆ (28-07-2023) ರಿಪ್ಪನ್ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ
ನಾಳೆ (28-07-2023) ರಿಪ್ಪನ್ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ ರಿಪ್ಪನ್ಪೇಟೆ : ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…
ಹೊಸನಗರ : 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪದಲ್ಲಿ ನಡೆದಿದೆ. ಮಾವಿನಕೊಪ್ಪದ ನಿವಾಸಿಯಾದ ಯಶೋದಮ್ಮ (60) ಬಾವಿಗೆ ಬಿದ್ದ ಮಹಿಳೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ, ತಮ್ಮ ಮನೆಯ ಹಿಂದಿನ ಬಾವಿಗೆ ಬಿದ್ದಿದ್ದಾರೆ. ಇನ್ನು ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ. ಅನುಮಾನದಿಂದ ಬಾವಿಯಲ್ಲಿ ನೋಡಿದ್ದಾರೆ. ಅತ್ತೆ…
ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್|malgudi
ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲುಗಳು ನಿಲಗಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಜನರಿಗೆ ಈ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ರಿಪ್ಪನಪೇಟೆ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ …
ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr
ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….
ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ
ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ನಡೆಸುತಿದ್ದ ಪ್ರತಿಭಟನೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕಳೆದ ಆರು ತಿಂಗಳಿಂದ ಶಾಲೆಗೆ ಗೈರು ಹಾಜರಾಗಿ…
ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ|protest
ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸುತಿದ್ದಾರೆ. ಕಳೆದ ಹಲವಾರು ತಿಂಗಳುಗಳಿಂದ ಮುಖ್ಯ ಶಿಕ್ಷಕರಾದ ಗಂಗನಾಯ್ಕ್ ಅನಧಿಕೃತವಾಗಿ ಸತತ ಗೈರು ಹಾಜರಾಗುತಿದ್ದು ಪೋಷಕರ ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಪೋಷಕರು ಹಾಗೂ ಸಾರ್ವಜನಿಕರು ಇಂದು ದಿಡೀರ್ ಪ್ರತಿಭಟನೆ ನಡೆಸಿ ಮುಖ್ಯ…