Headlines

ಆಗುಂಬೆ ಘಾಟಿಯಲ್ಲಿ ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದ ವ್ಯಕ್ತಿ – ಜೀವದ ಹಂಗು ತೊರೆದು ರಕ್ಷಿಸಿದ ಯುವಕರು|agumbe

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್‌ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ಕಾರಣ ಈ ಅವಘಡ ಸಂಭವಿಸಿದೆ. ಆಗುಂಬೆ ಘಾಟ್ ನಿಂದ 25 ರಿಂದ 30…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ…

Read More

ರಿಯಲ್ ಎಸ್ಟೇಟ್ ನಡೆಸುತ್ತಿರುವ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಧು ಬಂಗಾರಪ್ಪ|MB

ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ರಾಜ್ಯದ ಕೆಲವು ಕಡೆ ಶಿಕ್ಷಕರ ಕಾರ್ಯವೈಖರಿ ಕುರಿತಾಗಿ ದೂರುಗಳು ಕೇಳಿ ಬಂದಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಬಿ.ಆರ್.ಸಿ. ಮತ್ತು ಸಿ.ಆರ್.ಪಿ.ಗಳ ಕಾರ್ಯನಿರ್ವಹಣೆ ಕೂಡ ತೃಪ್ತಿಕರವಾಗಿಲ್ಲವೆಂಬ ದೂರು…

Read More

ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.  ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More

ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More