Headlines

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ಗಂಡು ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು|bull calf

ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ. ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ. ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು….

Read More

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ|kimmane

ಶಿವಮೊಗ್ಗ : ಕಾಂಗ್ರೆಸ್ ಗ್ಯಾರೆಂಟಿಯ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಮೋದಿಯವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಯಲ್ಲಿ  15 ಲಕ್ಷ ರೂ ಜನರ ಅಕೌಂಟ್ ಗೆ ಹಾಕುವುದಾಗಿ ಹೇಳಿಕೆ ನೀಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ 9 ವರ್ಷದಿಂದ ಇದ್ಯಾವುದನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು. ಕೇಂದ್ರದ ಮೋದಿ ಸರ್ಕಾರವನ್ನು ವಿರೋಧಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಗರದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆಯ…

Read More

ರಿಪ್ಪನ್‌ಪೇಟೆ: ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಅಪಘಾತ – ಗಾಯಾಳು ಮೆಗ್ಗಾನ್ ದಾಖಲು | ಜೀವನ್ಮರಣ ಹೋರಾಟದಲ್ಲಿದ್ದ ನರಿಗೆ ಸ್ಪಂದಿಸಿದ ಅರಣ್ಯ ಇಲಾಖೆ|Accident

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಟ್ಟಣದ ಸಮೀಪದ ವರಾನಹೊಂಡದ ಮುಖ್ಯರಸ್ತೆಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಮೂಗೂಡ್ತಿ ಕಡೆಗೆ ತೆರಳುತಿದ್ದ ಹೀರೋ ಹೊಂಡ ಸ್ಪ್ಲೆಂಡರ್ ಬೈಕ್ ಗೆ ನರಿ ಅಡ್ಡ ಬಂದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿ ಉಪನ್ಯಾಸಕ ಶ್ರೀಧರ್(50) ರವರಿಗೆ ತಲೆ ಹಾಗೂ ಕೈ ಗೆ ಗಂಭೀರ ಗಾಯಗಳಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ…

Read More

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿ|NSS

ವಿದ್ಯಾರ್ಥಿಗಳಲ್ಲಿ  ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಸಹಕಾರಿ ರಿಪ್ಪನ್‌ಪೇಟೆ;-ವಿದ್ಯಾರ್ಥಿ ಜೀವನ ಅತ್ಯುತ್ತಮವಾಗಿದ್ದು ತಮ್ಮ ವ್ಯಾಸಂಗದ ಜೊತೆ ಗ್ರಾಮದಲ್ಲಿನ ಸ್ವಚ್ಚತೆ ಹಾಗೂ ಪರಿಸರ ರಕ್ಷಣೆಯೊಂದಿಗೆ ಗ್ರಾಮೀಣ ಭಾಗದ ಮೂಲಭುತ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ಸೇವಾ ಶಿಬಿರಗಳು ಪೂರಕವಾಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಸಮೀಪದ ಕಲ್ಲುಹಳ್ಳ ಮಲೆನಾಡು ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಅವರಣದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ವತಿಯಿಂದ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷೀಕ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More