Headlines

ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara

ಹೊಸನಗರ : ಕ್ಷೇತ್ರ ಪುನರ್‌ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ. ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ….

Read More

ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್‌ ಅನ್ವರ್‌ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…

Read More

KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ

ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್‌ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…

Read More

ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…

Read More

ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….

Read More

ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…

Read More