ಜಿಲ್ಲಾ ಸುದ್ದಿ:
ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…
ಸಾಗರ : ಜೈನಮುನಿ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ|Protest
ಬೆಳಗಾವಿ ಜಿಲ್ಲೆಯ ಚಿಕ್ಕೂಡಿ ತಾಲೂಕಿನ ಹಿರೇಕೊಡಿ ನಂದಿ ಪರ್ವತದ ಜೈನ್ ಮಂದಿರದ ಆಚಾರ್ಯ 108 ಕಾಮಕುಮಾರ ನಂದಿ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಖಂಡಿಸಿ ಇಂದು ಸಾಗರದಲ್ಲಿ ಬಿಜೆಪಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಸರ್ವಸಂಗ ಪರಿತ್ಯಾಗಿಗಳಾಗಿರುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಅಲ್ಲದೇ ಅವರ ಹತ್ಯೆ ನಡೆದು ಮೂರು ದಿನವಾಗಿದ್ದು, ಸರ್ಕಾರ ಇನ್ನೂ ಸರಿಯಾದ ರೀತಿಯಲ್ಲಿ ತನಿಖೆ…
shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ
ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…
ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ
ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…
ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM
ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…
ಸಿದ್ದರಾಮಯ್ಯನವರು ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ – ಆರಗ ಜ್ಞಾನೇಂದ್ರ|Araga
ಸಿದ್ದರಾಮಯ್ಯನವರು ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ – ಆರಗ ಜ್ಞಾನೇಂದ್ರ ರಿಪ್ಪನ್ ಪೇಟೆ – ಜು.7 ರಂದು ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸಿದರು. ಅದು ಬಜೆಟ್ ಪುಸ್ತಕ ಎನ್ನುವುದಕ್ಕಿಂತ ಕೇಂದ್ರ ಹಾಗೂ ರಾಜ್ಯದ ಹಳೆಯ ಬಿಜೆಪಿ ಸರ್ಕಾರವನ್ನು ಟೀಕೆ ಮಾಡುವ ಪುಸ್ತಕ.14 ನೇ ಬಾರಿ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ್ರು. ಆದರೆ ತನ್ನ ರಾಜಕೀಯ ತೀಟೆಗೋಸ್ಕರ ಬಜೆಟ್ ಅನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಕೂಡ ಇತಿಹಾಸದಲ್ಲಿ ಸೇರಿರುವ ಘಟನೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು….
ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ!!jog falls
ಸಾಗರ : ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಆಗಾಗ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು ಪ್ರವಾಸಿಗರ ಮನಸೂರೆಗೊಂಡಿತು. ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಜೋಗಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ಆದರೆ ಪ್ರಸ್ತುತ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದ ಕಾರಣದಿಂದ ಜಲಪಾತದಲ್ಲಿ ಜಲಧಾರೆಯ ವೈಭೋಗ…
ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ನಮ್ಮ ಉಚ್ಚಾಟನೆ; ಡಾ.ರಾಜನಂದಿನಿ ವ್ಯಂಗ್ಯ|sagara
ಸಾಗರ : ಬಿಜೆಪಿ ಸೇರುವ ಮೊದಲು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಪಕ್ಷದ ತಾಲೂಕು ಪ್ರಮುಖರಾದ ಡಾ.ರಾಜನಂದಿನಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೆ ಉಚ್ಚಾಟನೆಗೆ ಒಂದು ಅರ್ಥ ಬರುತ್ತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ…
ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24
ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ. ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು…
ಕೋಣಂದೂರು : ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತಹ ಅಮಾನವೀಯ ಘಟನೆ !!!!cremation
ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತ ಅಮಾನವೀಯ ಘಟನೆ !? ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ದೊಡ್ಡ ಕೆರೆ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಗ್ರಾಮಪಂಚಾಯಿತಿಯ ಬೇಜವಾಬ್ದಾರಿಯಿಂದ ಸ್ಮಶಾನದ ಮೇಲ್ಭಾಗದ ಶೀಟುಗಳು ಇದ್ದರೂ ಸೋರುತ್ತಿದ್ದು ಅದರಲ್ಲೇ ಮೃತಪಟ್ಟ ವ್ಯಕ್ತಿಯೋರ್ವರ ಶವವನ್ನು ಕುಟುಂಬವರ್ಗ ಹಾಗೂ ಸ್ಥಳೀಯರು ಮಳೆ ನೀರಿನಲ್ಲಿ ಸಂಸ್ಕಾರ ನೆಡೆಸುತ್ತಿರುವ ಅಮಾನವೀಯ ಘಟನೆ ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಶುಕ್ರವಾರ ನೆಡೆದಿದೆ. ಸ್ಮಶಾನದಲ್ಲಿ ಸೂಕ್ತ ವ್ಯವಸ್ಥೆ ಹಾಗೂ ನಿರ್ವಹಣೆ ಇಲ್ಲದೆ ಇರುವುದರಿಂದ…