ಜಿಲ್ಲಾ ಸುದ್ದಿ:
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ
ರಿಪ್ಪನ್ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ 2014 ಮತ್ತು 2019 ರಲ್ಲಿ ರಾಷ್ಟ್ರದ ಜನತೆಗೆ ಮೋದಿ ಅವರ ಮೇಲಿದ್ದ ಅಭಿಮಾನ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟಾಗಿದ್ದು ಮೋದಿಯನ್ನು ಗೆಲ್ಲಿಸಲೇಬೇಕೆಂದು ಜನಸಾಮಾನ್ಯರೇ ಪಣ ತೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅನಾಯಸವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಪಕ್ಷದ ಆಂತರಿಕ ವಿಷಯ ಬಹಿರಂಗ ಚರ್ಚೆ…
ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ|Bakrid
ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ರಿಪ್ಪನ್ಪೇಟೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫೀ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು…
ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister
“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’ ರಿಪ್ಪನ್ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರಿಂದ ಸಾರ್ವಜನಿಕರಿಂದ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಬರಮಾಡಿಕೊಂಡರು. ಕಾರ್ಯಕರ್ತರ ಮತ್ತು ಸಾರ್ವಜನಿಕರ ಸ್ವಾಗತ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪನವರು ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಶಕ್ತಿ ಗ್ಯಾರಂಟಿ ಯೋಜನೆಯಡಿ ಬಸ್ ಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಂಡ ಮೇರಗೆ ಸಚಿವರು ಸ್ಪಂದಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಬಸ್…
ಬಾರದ ಮಳೆ : ಹಣ್ಣು-ತರಕಾರಿ ದರಗಳಲ್ಲಿ ಭಾರಿ ಏರಿಕೆ|price hike
ಮಳೆಯ ವಿಳಂಬದ ನಡುವೆ ಮಲೆನಾಡಿನಲ್ಲಿ ದಿನೇ ದಿನೇ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಶಿವಮೊಗದಲ್ಲಿ ಎರಡು ದಿನಗಳ ಹಿಂದಷ್ಟೇ ಟೊಮೆಟೊ ಕೆ.ಜಿಗೆ ₹40ಕ್ಕೆ ಸಿಗುತ್ತಿತ್ತು. ಆದರೆ ಈಗ ಅದು ₹80ಕ್ಕೆ ಹೆಚ್ಚಳಗೊಂಡಿದೆ. ಅದರ ಬೆನ್ನಲ್ಲೇ ಬೀನ್ಸ್ ಕೆ.ಜಿಗೆ ₹100, ಕ್ಯಾರೆಟ್ ₹80, ಬದನೆ ₹60, ಮೂಲಂಗಿ ₹40, ಹೂಕೋಸು ₹40, ಆಲೂಗಡ್ಡೆ ₹25, ಬಟಾಣಿಯ ಬೆಲೆಯೂ (₹80) ಒಂದೂವರೆ ಪಟ್ಟು ಹೆಚ್ಚಾಗಿದೆ. ಸೊಪ್ಪಿನ ಬೆಲೆಯೂ ಗಗನಕ್ಕೇರಿದೆ. ಕೊತ್ತಂಬರಿ ಕಟ್ಟಿಗೆ ₹ 10, ಸಬ್ಬಸಿಗೆ, ಎಳೆಹರಿವೆ, ದಂಟಿನ ಸೊಪ್ಪು, ಮೆಂತೆ…
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್ಐ ಪ್ರವೀಣ್ ರಿಪ್ಪನ್ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…
ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane
ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ…
ನಾಳೆ(25-06-23) ರಿಪ್ಪನ್ಪೇಟೆ ಪೊಲೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ರಿಪ್ಪನ್ಪೇಟೆ : ಶಿವಮೊಗ್ಗ ಜಿಲ್ಲಾ ಪೊಲೀಸ್ ,ಮೆಗ್ಗಾನ್ ರಕ್ತಕೇಂದ್ರ ಹಾಗೂ ಪಟ್ಟಣದ ಪೊಲೀಸ್ ಠಾಣೆ ಸಹಯೋಗದೊಂದಿಗೆ ಭಾನುವಾರ(25-06-23) ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪವಿತ್ರ ರಕ್ತದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಕೋರಿದೆ. ನೂತನ ಪಿಎಸ್ ಐ ಎಸ್ ಪಿ ಪ್ರವೀಣ್ ಜನಸ್ನೇಹಿ ಆಡಳಿತಕ್ಕೆ ಹೆಚ್ಚು ಒತ್ತು ನೀಡುತಿದ್ದು ಪೊಲೀಸರು ಕೇವಲ ಹೆಲ್ಮೇಟ್ ದಂಡ,ಲೈಸೆನ್ಸ್ ದಂಡ ಮತ್ತು…
ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ
ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…
ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗೆ ಹೃದಯಾಘಾತ – ಸಮಯ ಪ್ರಜ್ಞೆ ಮೆರೆದ ಆ್ಯಂಬುಲೆನ್ಸ್ ಡ್ರೈವರ್ಗಳು|heart attack
ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ. ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ. ಆ್ಯಂಬುಲೆನ್ಸ್ ಡ್ರೈವರ್ಗಳ ಮಾನವೀಯತೆ: ಇನ್ನೂ…
ರಿಪ್ಪನ್ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ
ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…