ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ : ಜ್ಯೋತಿ ಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದ್ದುಗೊಳಿಸಿದ ಜಿಲ್ಲಾಧಿಕಾರಿ|Jyothi mangalya
ರಿಪ್ಪನ್ಪೇಟೆ : ಜ್ಯೋತಿಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದುಗೊಳಿಸಿದ್ದ ಜಿಲ್ಲಾಧಿಕಾರಿ ರಿಪ್ಪನ್ಪೇಟೆ : ಪಟ್ಟಣದ ಹೆಸರಾಂತ ಕಲ್ಯಾಣ ಮಂದಿರಗಳಲ್ಲಿ ಒಂದಾದ ಜ್ಯೋತಿ ಮಾಂಗಲ್ಯ ಮಂದಿರದ ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲ್ಲಿನ ಬರುವೆ ಗ್ರಾಮದ ಸರ್ವೆ ನಂಬರ್ 63/1ಬಿ ರಲ್ಲಿ 0-38 ಗುಂಟೆ ಜಮೀನನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಕೊಂಡು ಭೂಪರಿವರ್ತನೆಯ ಷರತ್ತು ಉಲ್ಲಂಘನೆ ಮಾಡಿಕೊಳ್ಳುವುದರೊಂದಿಗೆ ಆ ಜಾಗದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಜಾಗದಲ್ಲಿ ಕಲ್ಯಾಣ ಮಂದಿರವನ್ನು ನಿರ್ಮಿಸಿರುವುದನ್ನು…
ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ|Congress
ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತಗೊಂಡ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬತೆದಿದ್ದಾರೆ. ಡಿಕೆಶಿ ವಕುಮಾರ್ ರಿಂದ ಕಿಮ್ಮನೆ ರತ್ನಾಕರ್ ಗೆ ಪತ್ರದ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ ಡಿಕೆಶಿ ಪರಾಜಿತರಾದರು ಪಕ್ಷಕ್ಕಾಗಿ ಉತ್ತಮ ಕೆಲಸ ನಿರ್ವಹಿಸಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಎದುರಾಗುವ ಲೋಕಸಭಾ…
ರಿಪ್ಪನ್ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು – ಸ್ಥಳೀಯರಿಂದ ರಕ್ಷಣೆ|Rpet
ರಿಪ್ಪನ್ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು ರಿಪ್ಪನ್ಪೇಟೆ : ಗ್ರಾಪಂ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಹಸುವೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಚೌಡೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ಗ್ರಾಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ತೆರೆದ ಪ್ರದೇಶದಲ್ಲಿ ಬಾವಿ ನಿರ್ಮಿಸುವಾಗ…
ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life
ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು. ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…
ರಿಪ್ಪನ್ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ|BAR
ರಿಪ್ಪನ್ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ್ ತೆರೆಯಲು ಹುನ್ನಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ…
ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru
ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ. ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ. 2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…
ರಿಪ್ಪನ್ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP
ರಿಪ್ಪನ್ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…
ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL
ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…
ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara
ಹೊಸನಗರ : ಕ್ಷೇತ್ರ ಪುನರ್ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ. ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ….