ಜಿಲ್ಲಾ ಸುದ್ದಿ:
ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election
ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…
ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate
“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…
ಚುನಾವಣೆ ಹಿನ್ನೆಲೆ – ರಿಪ್ಪನ್ಪೇಟೆಯಲ್ಲಿ CRPF ಪಥಸಂಚಲನ
ರಿಪ್ಪನ್ಪೇಟೆ : ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮತ್ತು ಪೊಲೀಸ್ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ ಸಾಗರ ರಸ್ತೆ ಮೂಲಕ ತೀರ್ಥಹಳ್ಳಿ ರಸ್ತೆಯಲ್ಲಿ ಸಾಗಿತು ನಂತರ ಚೌಡೇಶ್ವರಿ ಕಾಲೋನಿಯ ಮೂಲಕ ಶಿವಮೊಗ್ಗ ರಸ್ತೆಯ ಪೊಲೀಸ್…
ಕಾಗೋಡು ಪುತ್ರಿ ರಾಜನಂದಿನಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ – ನನ್ನ ಎದೆಗೆ ಚೂರಿ ಹಾಕಿದ ಹಾಗೇ ಆಗುತ್ತಿದೆ – ಕಾಗೋಡು|Kagodu
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿ ಹಾಗೂ ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ KPCC ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಯವರನ್ನು ಭೇಟಿ ಮಾಡಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು….
Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್
ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ – ಹಾಲಪ್ಪ ಮತ್ತು ಆರಗ ಜ್ಞಾನೇಂದ್ರರಿಗೆ ಟಿಕೆಟ್ ಘೋಷಣೆ|BJP
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಶಿವಮೊಗ್ಗ ನಗರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ. …
ಭಾರಿ ಬಹುಮತದಿಂದ ಕಿಮ್ಮನೆ ರತ್ನಾಕರ್ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ|RMM
ಭಾರಿ ಬಹುಮತದಿಂದ ಕಿಮ್ಮನೆ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ಪೇಟೆ : ತೀರ್ಥಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ, ಸಹಕಾರಿ ವಿಭಾಗದ ಡಾ.ಆರ್.ಎಂ.ಮಂಜುನಾಥ್ ಗೌಡ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ತೀರ್ಥಹಳ್ಳಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಗೊಂದಲ,ಭಿನ್ನಾಭಿಪ್ರಾಯ ಇಲ್ಲ,ಸಣ್ಣ,ಪುಟ್ಟ ಭಿನ್ನಾಭಿಪ್ರಾಯ ಗಳಿರಬಹುದು ಅದನ್ನು ಬಗೆಹರಿಸಿಕೊಂಡು ಪ್ರೀತಿ,ವಿಶ್ವಾಸದೊಂದಿಗೆ ಒಂದಾಗಿ ನಮ್ಮ ಪಕ್ಷವನ್ನು ಗೆಲ್ಲಿಸಲಿದ್ದೇವೆ.ಟಿಕೆಟ್ ಘೋಷಣೆ ಮುನ್ನ ಇದ್ದ ಭಿನ್ನಾಭಿಪ್ರಾಯ ಸಹಜ…
ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ|high- temperature
ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ ರಿಪ್ಪನ್ಪೇಟೆ;-ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ ಕುಮದ್ವತಿ ಶರ್ಮಿನಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-40 ಡಿಗ್ರಿಯಷ್ಟು ಬಿಸಿಲಿನ ಝಳಕ್ಕೆ ರೈತ ನಾಗರೀಕರು ತತ್ತರಿಸಿದ್ದಾರೆ.ಕುಡಿಯಲು…
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…
ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ ಮೌಲ್ಯದ 9.5 KG ಚಿನ್ನ ವಶ
ಶಿವಮೊಗ್ಗ ಪೊಲೀಸರು ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ. ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ. ಇವತ್ತು ಬೆಳಗ್ಗೆ…