ಜಿಲ್ಲಾ ಸುದ್ದಿ:
ನಾಳೆ(31-03-2023) ರಿಪ್ಪನ್ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್
ರಿಪ್ಪನ್ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…
ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara
ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…
ಗೃಹ ಸಚಿವರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ
ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಪಂ ವ್ಯಾಪ್ತಿಯ ಮೂಲಸೌಕರ್ಯ ವಂಚಿತ ಮಾದ್ಲುಮನೆ ,ಉಂಬ್ಳೆಬೈಲು ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. 60 ವರ್ಷಗಳಿಂದ ಗ್ರಾಮ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ಚುನಾವಣಾ ಸಮಯದಲ್ಲಿ ಜನಪ್ರತಿನಿಧಿಗಳ ಸುಳ್ಳು ಭರವಸೆಗಳಿಗೆ ತುತ್ತಾಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳು ಭರವಸೆಗಳಿಂದ ಬೇಸತ್ತಿರುವ ಗ್ರಾಮಸ್ಥರು, ಸಾಮೂಹಿಕವಾಗಿ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗ್ರಾಮಸ್ಥರಿಗೆ ಚುನಾವಣೆಯನ್ನು ಬಹಿಷ್ಕರಿಸಲು…
ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election
ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…
ರಿಪ್ಪನ್ಪೇಟೆ : ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ – ಲಾರಿ ಸುಟ್ಟು ಭಸ್ಮ|ಬಸವಾಪುರದಲ್ಲಿ ಅಡಿಕೆ ತೋಟಕ್ಕೆ ಬೆಂಕಿ – 200 ಅಡಿಕೆ ಗಿಡ ನಾಶ
ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್…
ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election
ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…
RIPPONPET NEWS ರಿಪ್ಪನ್ಪೇಟೆ : ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದು ಮಾಜಿ ಗ್ರಾಪಂ ಸದಸ್ಯೆ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಿಪ್ಪನ್ಪೇಟೆ ಶಬರೀಶನಗರದ ಕಾಂಗ್ರೆಸ್ ಮುಖಂಡರಾಗಿದ್ದ ಮಂಜನಾಯ್ಕ್ ಮತು ಮಾಜಿ ಗ್ರಾಪಂ ಸದಸ್ಯರಾದ ಗಿರಿಜಾ ಎಂ ನಾಯ್ಕ್ ರವರು ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಳವಳ್ಳಿ ಗ್ರಾಮದ PLD ಬ್ಯಾಂಕ್ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾಗಿದ್ದ ಗೋಪಾಲಣ್ಣ ಹಾಗೂ ಅವರ ಬೆಂಬಲಿಗರಾದ ರಮೇಶ್, ಕುಮಾರ್, ಉಮಾಪತಿ,…
ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ|Reward
ಕರ್ನಾಟಕ ರಾಜ್ಯದ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದಾರೆ. 2022 ನೇ ಸಾಲಿನ ಮುಖ್ಯಮಂತ್ರಿ ಪದಕ ಜಿಲ್ಲೆಯಲ್ಲಿ ಮೂವರಿಗೆ ಲಭಿಸಿದೆ. ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಕೊಡುವ ಮುಖ್ಯಮಂತ್ರಿಗಳ ಪದಕ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕೆ.ಶಿವಕುಮಾರ್, ಡಿಎಆರ್ ನ ಸಿಬ್ಬಂದಿ ಜೈಜಗದೀಶ್ ಗೆ ಲಭಿಸಿದೆ. ಮುಖ್ಯಮಂತ್ರಿ ಪದಕವನ್ನ ನೀಡುವ…
ರಿಪ್ಪನ್ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…
ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest
ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ. ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…