ಜಿಲ್ಲಾ ಸುದ್ದಿ:
ವಸ್ತುನಿಷ್ಠ ವರದಿಗೆ ಅಡ್ಡಿ, ಪತ್ರಕರ್ತರ ಸ್ವಾತಂತ್ರ್ಯ ಹರಣಕ್ಕೆ ಯತ್ನ – ಶಾಸಕ ಹರತಾಳು ಹಾಲಪ್ಪ ವಿರುದ್ದ ದೂರು|halappa
ಸಾಗರದಲ್ಲಿ ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು…
“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number
ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…
ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport
ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…
ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…
ರಂಜಾನ್ ಉಪವಾಸ ತಿಂಗಳ ಪ್ರಥಮ ಚಂದ್ರ ದರ್ಶನ – ಗುರುವಾರದಿಂದ ಉಪವಾಸ ಆಚರಣೆ|Ramzan
ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ. ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ, ಮುಸ್ಲಿಮರ ಪವಿತ್ರ ರಮಝಾನ್ ಉಪವಾಸ ತಿಂಗಳ ಪ್ರಥಮ ಚಂದ್ರದರ್ಶನವು ಇಂದು ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ…
ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute
ರಿಪ್ಪನ್ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…
ರಿಪ್ಪನ್ಪೇಟೆ – ಅಗಲಿದ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಜನಸಾಗರ|Procession – body
ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ರಿಪ್ಪನ್ಪೇಟೆಯ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು. ಇಂದು ಮುಂಜಾನೆ 4 ಗಂಟೆಗೆ ಪಾರ್ಥಿವ ಶರೀರ ಶಬರೀಶನಗರದ ಸ್ವಗೃಹಕ್ಕೆ ಆಗಮಿಸಿದ್ದು,ಯೋಧ ಸಂದೀಪ್ ಅವರ ಪಾರ್ಥಿವ ಶರೀರ ಮನೆ ತಲುಪುತ್ತಿದ್ದಂತೆ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು.ಅಲ್ಲಿ ಸೇರಿದ್ದ ಜನರ ಕಣ್ಣುಗಳು ಕೂಡ ತೇವಗೊಂಡವು. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು….
ಡಿಕೆಶಿ ಭೇಟಿಯಾದ ಸಾಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು|ಬೇಳೂರಿಗೆ ಟಿಕೆಟ್ ಘೋಷಿಸುವಂತೆ ಒತ್ತಾಯ|congress
ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಹೆಚ್ಚುತಿದ್ದು ಎಲ್ಲಾ ಪಕ್ಷಗಳು 224 ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳ ಆಯ್ಕೆ ಮಾಡಿ ರಾಜ್ಯದ ಗದ್ದುಗೆ ಏರುವ ಉತ್ಸಾಹದಲ್ಲಿದೆ. ಇಂದು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ 300 ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿಗೆ ದೌಡಾಯಿಸಿದ್ದು ಸಿದ್ದರಾಮಯ್ಯ ,ಪರಮೇಶ್ವರ್ ಮತ್ತು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರವರನ್ನು ಭೇಟಿಯಾಗಿ ಬೇಳೂರು ಗೋಪಾಲಕೃಷ್ಣ ರವರಿಗೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಕೈ ನಾಯಕರು ಕಾಂಗ್ರೆಸ್…
ನಾಳೆ(22-03-2023) ಬೆಳಿಗ್ಗೆ ರಿಪ್ಪನ್ಪೇಟೆಗೆ ಮೃತ ಯೋಧ ಸಂದೀಪ್ ಪಾರ್ಥೀವ ಶರೀರ – ವಿನಾಯಕ ವೃತ್ತದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ಯೋಧ ಸಂದೀಪ್ ಪಾರ್ಥೀವ ಶರೀರ ನಾಳೆ ಬೆಳಿಗ್ಗೆ 06 ಗಂಟೆಗೆ ರಿಪ್ಪನ್ಪೇಟೆಗೆ ಆಗಮಿಸಲಿದ್ದು ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂದೀಪ್ ಪಾರ್ಥೀವ ಶರೀರ ತಲುಪಿದೆ. ಜಿಲ್ಲಾಡಳಿತದ ಆಂಬ್ಯುಲೆನ್ಸ್ ಮೂಲಕ ನಾಳೆ ಬೆಳಿಗ್ಗೆ 6 ಗಂಟೆಗೆ ನೇರವಾಗಿ ಶಬರೀಶನಗರದ ಸ್ವಗೃಹಕ್ಕೆ ಪಾರ್ಥೀವ ಶರೀರ ಆಗಮಿಸಲಿದ್ದು ಮನೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿ 8.30 ಕ್ಕೆ ಮೆರವಣಿಗೆಯ ಮೂಲಕ ತೆರಳಿ ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ವಿನಾಯಕ…
ಮಾ.25ಕ್ಕೆ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಪ್ರಧಾನಿ ಮೋದಿ!!! ಯಾಕೆ ಗೊತ್ತಾ..?? ಈ ಸುದ್ದಿ ನೋಡಿ
ಶಿವಮೊಗ್ಗ ನಗರದ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ. ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ. ಚುನಾವಣಾ ಪ್ರಚಾರಕ್ಕಾಗಿ ಬರುತ್ತಿರುವ ಪ್ರಧಾನಿ ಮೋದಿ ಮಾ.25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ…