ಜಿಲ್ಲಾ ಸುದ್ದಿ:
ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan
ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…
ಸಾಗರ : ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಸಿದ್ದಾರೆ….
ನಾಳೆ(19-03-2023) ರಿಪ್ಪನ್ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ
ರಿಪ್ಪನ್ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…
ಶಿವಮೊಗ್ಗ : ಲೇಡೀಸ್ ನೈಟ್ ಪಾರ್ಟಿ ತಡೆದ ಭಜರಂಗದಳದ ಕಾರ್ಯಕರ್ತರು|Ladies party
ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ…
ಅಪ್ಪು ಜನ್ಮ ದಿನಾಚರಣೆ ಅಂಗವಾಗಿ ಹುಂಚಾದಲ್ಲಿ ಅಭಿಮಾನಿಗಳಿಂದ ಬಿರಿಯಾನಿ ವಿತರಣೆ|ರಿಪ್ಪನ್ಪೇಟೆ ಗೇರುಬೀಜ ನೌಕರರಿಂದ ಅಪ್ಪು ಜನ್ಮ ದಿನಾಚರಣೆ|APPU
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್ ರಾಜ್ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್…
ನಾಗರಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ|Hospital
ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ ಪುಟ್ಟ ಖಾಯಿಲೆಗಳಿಗೆ ತಾಲೂಕ್ ಆಸ್ಪತ್ರೆಯನ್ನು ಅವಲಂಭಿಸಬಾರದು ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ…
ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ
ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…
ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA
ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…
ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane
ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಅಭಿಮಾನಿಗಳಿಂದ ಚುನಾವಣಾ ವೆಚ್ಚ ಭರಿಸಲು ದೇಣಿಗೆಗಳ ಮಹಾಪೂರ|GKB
ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ…