ಜಿಲ್ಲಾ ಸುದ್ದಿ:
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಗಡಿಪಾರಿಗೆ ಆಗ್ರಹ|SDPI
ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು ಆಜಾನ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುದ್ವೇಷದ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ…
ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬನಿಗೆ ಮಂಗನ ಖಾಯಿಲೆ (KFD) ಧೃಡ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ. ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು. ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.
ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ -ಕಾಗೋಡು ತಿಮ್ಮಪ್ಪ|congress
ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ’’ ಕಾಗೋಡು ತಿಮ್ಮಪ್ಪ ರಿಪ್ಪನ್ಪೇಟೆ;-ಹೆಣ್ಣು ಮಗಳು ಸ್ವತಂತ್ರವಾಗಿ ವಿಚಾರವಂತರಾಗಿ ಬದುಕುವಂತ ಇಚ್ಚಾಶಕ್ತಿಯನ್ನು ಪ್ರದರ್ಶಿಸಬೇಕು,ಗೇಣಿದಾರರಿಗೆ ಭೂ ಒಡೆತನ ಕೊಡುವುದು ಹೇಗೋ ಹಾಗೆ ಸಮಾಜದಲ್ಲಿ ಹೆಣ್ಣು ಮಗಳಿಗೆ ಪಾಲುದಾರಳು ಆ ಕಾರಣ ಹೆಣ್ಣು ಮಗಳಿಗೆ ಸಮಾನವಾಗಿ ಅಸ್ತಿ ಕೊಡಬೇಕು ಎಂಬ ತತ್ವವನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಜಾತಂತ್ರ ವ್ಯವಸ್ಥೆಗೆ ನೀವೇ ರಾಜರಾಗುತ್ತೀರಾ ಅಧೀನಾರಾಗುತ್ತೀರಾ ಆ ನಿಟ್ಟಿನಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಿಷ್ಟಗೊಳಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ರಿಪ್ಪನ್ಪೇಟೆಯ…
ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP
ಶಾಸಕ ಹಾಲಪ್ಪ ವಿರುದ್ಧ ಬಿಎಸ್ವೈಗೆ ದೂರು ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್ವೈ, ಸಮಾಧಾನ…
ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ|hombuja
ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾರಥೋತ್ಸಕ್ಕೆ 2023ರ ಮಾರ್ಚ್ 12ರ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಚಾಲನೆ ನೀಡಿದರು. ಸಂಜೆ ನಾಗವಾಹನ ಉತ್ಸವವು ಜರುಗಿತು. ಈ ಎಲ್ಲಾ ಪೂಜಾ ಹಾಗೂ ಉತ್ಸವಗಳಲ್ಲಿ ಧರ್ಮ ಬಾಂಧವರು ಪಾಲ್ಗೊಂಡಿದ್ದರು….
ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident
ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…
ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|
ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…
ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station
ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…
ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…
ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!
ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…