Headlines

ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…

Read More

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…

Read More

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್  20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ  ಆಚರಿಸಲಾಯಿತು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ  ಗುರುವಾರ ನಡೆದ  ಕಾರ್ಯಕ್ರಮವನ್ನು  ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಡಾ. ಆರ್. ಎಂ. ಮಂಜುನಾಥ್…

Read More

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ…

Read More

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್‌ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು…

Read More

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್‍ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More