ಜಿಲ್ಲಾ ಸುದ್ದಿ:
ಹೊಸನಗರ ತಾಲೂಕಿಗೆ ನೂತನ ತಹಶೀಲ್ದಾರ್ ನೇಮಕ – ಯಾರು ಗೊತ್ತಾ..??? ಈ ಸುದ್ದಿ ನೋಡಿ|tranfer
ಹೊಸನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕೆ ಪುರಂದರ ಅವರು ಪ್ರಸ್ತುತ ಉಡುಪಿ ಜಿಲ್ಲೆಯ ಹೆಬ್ರಿ ತಾಲುಕಿನ ತಹಶೀಲ್ದಾರ್(ಗೇಡ್ 1) ಆಗಿ ಕಾರ್ಯ ನಿರ್ವಹಿಸುತಿದ್ದು ಅವರನ್ನು ಹೊಸನಗರ ತಾಲೂಕ್ ವಿ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಹಿನ್ನಲೆಯಲ್ಲಿ ಕೆ ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿ…
ಬಿಎಸ್ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY
ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ: ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್ಡೇ ದಿನವೇ ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್ ನೀಡಲಿದ್ದಾರೆ. ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ…
ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಅಭಿವೃದ್ಧಿಯ ಸಂಕೇತ – ಬಿಎಸ್ ವೈ ಭಾವುಕ ನುಡಿ|BSY
ಇದೊಂದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆ. ಶಿವಮೊಗ್ಗದ ಜನ ಹಾಗೂ ಶಿಕಾರಿಪುರದ ಜನರು ನನ್ನನ್ನು ಶಾಸಕನನ್ನಾಗಿ ಮಾಡಿ ನಾಡಿನ ಜನರ ಸೇವೆಗೆ ಅವಕಾಶ ನೀಡಿಕೊಟ್ಟಿದ್ದಾರೆ. ಮೋದಿಯವರ ಆಶೀರ್ವಾದದಿಂದ ಸಂಸತ್ ಸದಸ್ಯ, ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿಯಾಗಿ ಸೇವೆಗೆ ಅವಕಾಶ ಸಿಕ್ಕಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾವುಕರಾಗಿ ನುಡಿದರು. ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ…
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ – ಬಿಎಸ್ ವೈ ಗೆ ಹಸಿರು ಶಾಲು ಹೊದಿಸಿ ವಿಶೇಷ ಸನ್ಮಾನ ಮಾಡಿದ ಮೋದಿ|modi
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ರವರು ಸೋಗಾನೆಯ ನೂತನ ವಿಮಾನ ನಿಲ್ದಾಣದೊಂದಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಿದ್ದಾರೆ. 7,165 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು. 995 ಕೋಟಿ ವೆಚ್ಚದ 96 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಅಡಿಗಲ್ಲು ಹಾಗೂ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಶಂಕುಸ್ಥಾಪನೆ , 105 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, 953 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. 66.44 ಕೋಟಿ ವೆಚ್ಚದ ಬೈಂದೂರು-ರಾಣೆಬೆನ್ನೂರು…
ಪ್ರಧಾನಿ ಮೋದಿಗೆ ಮನವಿ ನೀಡಲು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗುತ್ತಿರುವ ವಿಎಸ್ ಐಎಲ್ ಹೋರಾಟಗಾರರು|vsil
ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗೆ ಕಾರ್ಖಾನೆ ಉಳಿಸುವಂತೆ ಮನವಿ ನೀಡಲೇಬೇಕು ಎಂದು ನಿರ್ಧರಿಸಿದ್ದ ಸಾವಿರಾರು ವಿಐಎಸ್ ಎಲ್ ಗುತ್ತಿಗೆ ನೌಕರರ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರು ತಡೆದರೂ ಗದ್ದೆಯಲ್ಲಿ ಎದ್ದು ಬಿದ್ದು ಓಡಿ ಶಿವಮೊಗ್ಗ ವಿಮಾನ ನಿಲ್ದಾಣದ ಕಡೆ ಹೋರಾಟಗಾರರು ತೆರಳುತಿದ್ದಾರೆ. ಇಂದು ಬೆಳಗ್ಗಿನ ಜಾವವೇ ಸಂಘದ 40 ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇಂದು ಬೆಳಿಗ್ಗೆ ಭದ್ರಾವತಿ ಶಾಸಕ…
ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಿಂದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ – ವಿಶೇಷತೆ ಏನು ಗೊತ್ತಾ..???|airport
ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ….
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom
ರಿಪ್ಪನ್ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…
ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport
ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…
ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY
ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…