Headlines

ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು…

Read More

ತೀರ್ಥಹಳ್ಳಿ ಪಟ್ಟಣದ ತುಡ್ಕಿಯಲ್ಲಿ ಕಾಣಿಸಿಕೊಂಡ ಚಿರತೆ – ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ|leopard

ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ. ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು…

Read More

ಅತ್ಯಂತ ನೀರಸ,ಚುನಾವಣಾ ತಂತ್ರಗಾರಿಕೆಯ ಬಜೆಟ್‌ – ಜೆಡಿಎಸ್|JDS

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ 2023-24 ನೇ ಸಾಲಿನ ಬಜೆಟ್ ಚುನಾವಣಾ ತಂತ್ರಗಾರಿಕೆ ಬಜೆಟ್ ಆಗಿದೆಯೇ ಹೊರತು ಇದರಲ್ಲಿ ಯಾವುದೇ ಅಭಿವೃದ್ಧಿ ಕಾರ್ಯದ ಮುನ್ನೋಟವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಆರೋಪಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಎಲ್ಲೂ ಕೂಡ ದುಪ್ಪಟ್ಟು ಮಾಡಲು ಯೋಜನೆ ಹಾಕಿಕೊಂಡಿಲ್ಲ. ಕೇಂದ್ರ ಸರ್ಕಾರ ಈ ಸಲ ಕೃಷಿಗೆ 50 ಸಾವಿರ ಕೋಟಿ ರೂ‌ಪಾಯಿ ಅನುದಾನ ಕಡಿಮೆ ಮಾಡಿದ್ದಾರೆ….

Read More

ಇಂದು (17-02-2023) ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ|KHOKHO

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು(17-02-2023) ಸ್ವಾಮಿ ವಿವೇಕಾನಂದ ಖೋ ಖೋ ಗೆಳೆಯರ ಬಳಗದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಖೋಖೋ ಕ್ರೀಡಾಪಟು ಪೃಥ್ವಿ ಸ್ಮರಣಾರ್ಥ ಅಂತರ್ ಜಿಲ್ಲಾ ಮಟ್ಟದ 4ನೇ ವರ್ಷದ ಹಗಲು,ಹೊನಲು-ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಖೋಖೋ ಕ್ರೀಡಾಪಟುಗಳು ಈ ಕ್ರೀಡಾಕೂಟಕ್ಕೆ ಭಾಗವಹಿಸುತಿದ್ದು ಅತ್ಯಂತ ರೋಚಕ ಪಂದ್ಯಾವಳಿಗಳು ನಡೆಯಲಿದೆ.

Read More

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್|FOREST

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು ಕೊಠಡಿಯಲ್ಲಿ ಪಟ್ಟಣದ ಹಳೇ ತಾಲೂಕು ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ನಾಟವನ್ನು ಸಂಗ್ರಹಿಸಲಾಗಿತ್ತು. ಆದರೆ ಅಕ್ರಮವಾಗಿ ಸಾಗಾಟ ಮಾಡುತ್ತಿವ ಖಚಿತ ಮಾಹಿತಿ ‌ಮೇರೆಗೆ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಅವರ ತಂಡ…

Read More

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಕಟ್ಟಡ ಏರಿ ಕುಳಿತ ಹೊಸನಗರ ತಾಲೂಕಿನ ನಗರ ಗ್ರಾಪಂ ಅಧ್ಯಕ್ಷ…!!!|nagara

ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ. ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು  ಪರದಾಡುವಂತಾಗಿದೆ.  ಈ ಹಿನ್ನೆಲೆಯಲ್ಲಿ ಕಟ್ಟಡವೇರಿ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!

ಶಿವಮೊಗ್ಗದ  ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….

Read More