ಜಿಲ್ಲಾ ಸುದ್ದಿ:
ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್ ಮೇಲಿನ ಹಲ್ಲೆ ಕೇಸ್ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…
ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja
ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ – ನಳಿನ್ ಕುಮಾರ್ ಕಟೀಲ್
ರಿಪ್ಪನ್ಪೇಟೆ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ ಪಕ್ಷ ಗೆಲ್ಲಲಿದೆ ಎಂದು ಮಂಗಳೂರು ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಇದೆ ಎನ್ನುವುದು ವಿರೋಧ ಪಕ್ಷಗಳು ಕಟ್ಟಿರುವ ಕಪೋಕಲ್ಪಿತ ಕಥೆಯಾಗಿದ್ದು ನಮ್ಮಲ್ಲಿ ಯಾವುದೇ…
ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವಾಗಿ ಮಹತ್ತರ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು|airport
ಶಿವಮೊಗ್ಗ : ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನ ನಿತ್ಯ ಬರುತ್ತಿದ್ದಾರೆ. ರನ್ ವೇ ಮೇಲೆ…
ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire
ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…
ಹೊಂಬುಜಾ ಶ್ರೀಗಳ ಸಮಾಜಮುಖಿ ಚಿಂತನೆಯಿಂದ ಶ್ರೀಕ್ಷೇತ್ರ ಅಭಿವೃದ್ಧಿಯ ಪಥದತ್ತ ಸಾಗಿದೆ – ಧರ್ಮಸ್ಥಳ ಸುರೇಂದ್ರ ಕುಮಾರ್|hombuja
ರಿಪ್ಪನ್ಪೇಟೆ : ಕೇವಲ12 ವರ್ಷದಲ್ಲಿ ಹೊಂಬುಜ ಜೈನಮಠ ಅಪಾರವಾಗಿ ಆಭಿವೃದ್ದಿಯಾಗಿರುವ ಹಿಂದೆ ಹೊಂಬುಜಾ ಶ್ರೀಗಳವರ ಸಮಾಜ ಮುಖಿ ಚಂತನೆ ಮತ್ತು ಧರ್ಮದ ಪರಿಪಾಲನೆ ಪ್ರಶಂಸನೀಯ ಎಂದು ಭಾರತೀಯ ಜೈನಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳದ ಸುರೇಂದ್ರ ಕುಮಾರ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಹೊಂಬುಜಾ ಕ್ಷೇತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಅಭಿವೃದ್ಧಿಯತ್ತ ಸಾಗಿರುವುದಕ್ಕೆ ಹೊಂಬುಜಾ ಶ್ರೀಗಳ ಸಮಾಜಮುಖಿ…
ರಿಪ್ಪನ್ಪೇಟೆ : ಕ್ಷತ್ರಿಯ ಮರಾಠ ಯುವ ವೇದಿಕೆಗೆ ಜಾಗ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ – ಶಾಸಕರಿಗೆ ಅಭಿನಂದನೆ ಸಲ್ಲಿಕೆ|Ripponpet
ರಿಪ್ಪನ್ ಪೇಟೆ : ಪಟ್ಟಣದ ಕ್ಷತ್ರೀಯ ಮರಾಠ ಯುವ ವೇದಿಕೆಯ ಬಹುವರ್ಷಗಳ ಬೇಡಿಕೆಯನ್ನು ಹರತಾಳು ಹಾಲಪ್ಪ ರವರ ವಿಶೇಷ ಪ್ರಯತ್ನದಿಂದ ಈಡೇರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಾಗರ -ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರ ವಿಶೇಷ ಪ್ರಯತ್ನದಿಂದ ಹೊಸನಗರ ತಾಲೂಕಿನ ರಿಪ್ಪನಪೇಟೆಯ “ಕ್ಷತ್ರಿಯ ಮರಾಠ ಯುವ ವೇದಿಕೆ” ಯ ಬಹು ವರ್ಷಗಳ ಬೇಡಿಕೆಯಾಗಿದ್ದ, ಬಡ ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣ ಉದ್ದೇಶಕ್ಕೆ ಕೆರೆಹಳ್ಳಿ ಗ್ರಾಮದ ಸ.ನಂ 37 ರಲ್ಲಿ, 2…
ರಿಪ್ಪನ್ಪೇಟೆ ಮತ್ತು ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಮತ್ತು RAF ಸಿಬ್ಬಂದಿಗಳ ಪಥಸಂಚಲನ – ಯಾಕೆ ಗೊತ್ತಾ..?? ಈ ಸುದ್ದಿ ನೋಡಿ
ರಿಪ್ಪನ್ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ…
ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ
ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…
ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV
ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್ಎನ್ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು. ನಗರದ ಸೈನ್ಸ್ ಮೈದಾನದಲ್ಲಿ…