ಜಿಲ್ಲಾ ಸುದ್ದಿ:
ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha
ರಿಪ್ಪನ್ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…
ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara
ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…
ಪಿಂಪ್ ಕೆಲಸ ಮಾಡುವವರ ಬಳಿ ಹಣ ಮಾಡಿಕೊಳ್ಳುವ ಸಂಧರ್ಭ ಬಂದರೇ ಆತ್ಮಹತ್ಯೆ ಮಾಡಿಕೊಳ್ಳುವೆ – ಗೃಹಸಚಿವ ಆರಗ ಜ್ಞಾನೇಂದ್ರ|araga
ಕುಖ್ಯಾತ ಕ್ರಿಮಿನಲ್ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಮನೆಗೆ ಸಾವಿರಾರು ಜನ ಬಂದು ಹೋಗುತ್ತಾರೆ. ಎಲ್ಲರ ಕ್ಯಾರೆಕ್ಟರ್ ಸರ್ಟಿಫಿಕೇಟ್ ನೋಡಿ ಒಳಗೆ ಬಿಡಲಾಗುವುದಿಲ್ಲ. ಹೀಗಿರುವಾಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿನಾಕಾರಣ ನನ್ನ ಹೆಸರು ಹೇಳಿ ಗೊಂದಲ ಹುಟ್ಟಿಸುತ್ತಿರುವುದು ಅವರ ಘನತೆಗೆ ತಕ್ಕುದಲ್ಲ. ರವಿಯ ಜತೆಗೆ ನನಗೆ ಸಂಪರ್ಕ ಇದ್ದರೆ. ಅವನನ್ನು ಬಂಧಿಸದಂತೆ ತಡೆಯುವುದು ದೊಡ್ಡ ವಿಚಾರವಾಗಿರಲಿಲ್ಲ. ಅಂಥವನ ಹತ್ತಿರ ದುಡ್ಡು ತೆಗೆದುಕೊಳ್ಳುವ ಸಂದರ್ಭ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು…
ನಾಳೆ(15-01-2023) ರಿಪ್ಪನ್ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet
ನಾಳೆ ರಿಪ್ಪನ್ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ. ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ…
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC
ರಿಪ್ಪನ್ಪೇಟೆ : ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…
ಹೊಸನಗರ ಬ್ಲಾಕ್ ಕಾಂಗ್ರೆಸ್ (ಅ) ಘಟಕದ ನೂತನ ಅಧ್ಯಕ್ಷರಾಗಿ ಆಸೀಫ಼್ ಭಾಷಾ ನೇಮಕ|congress
ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ರಿಪ್ಪನ್ಪೇಟೆಯ ಆಸೀಫ಼್ ಭಾಷಾ ರವರನ್ನು ನೇಮಕ ಮಾಡಲಾಗಿದೆ. ರಿಪ್ಪನ್ಪೇಟೆ ಗ್ರಾಮ ಪಂಚಾಯತಿ ಸದಸ್ಯರೂ ಹಾಗೂ ರಿಪ್ಪನ್ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಆಸೀಫ಼್ ಭಾಷಾ ರವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಆದೇಶದಂತೆ ನೇಮಕ ಮಾಡಲಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಪಸಂಖ್ಯಾತ ವಿಭಾಗದ…
ಜ.18 ರಂದು ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – ಜಾತ್ರಾ ಮಹೋತ್ಸವಕ್ಕೆ ಹರಿದು ಬರಲಿರುವ ಜನ ಸಾಗರ
ರಿಪ್ಪನ್ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ಜನವರಿ ೧೮ ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಆರಂಭಗೊಳ್ಳಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದೊಂದು ಬರುವ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ.ಜಮೀನಿನಲ್ಲಿ ಹಾಕಿರುವ ಬೆಳೆ ಸಂವೃದ್ದವಾಗಿ ಯಾವುದೇ ರೋಗ ಕಾಣಿಸಿಕೊಳ್ಳದಂತೆ ಸಂತಾನ ಭಾಗ್ಯ…
ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane
ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….
ರಾಷ್ಟ್ರೀಯ ಕ್ರೀಡಾಪಟು ಬೆಳ್ಳಿ ಭರತ್ ರಾಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ|volleyball
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ದಿವಂಗತ ಭರತ್ ರಾಜ್ ( ಬೆಳ್ಳಿ ) ಸ್ಮರಣಾರ್ಥ ವರಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾರಂಬಳ್ಳಿ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ವಾಲಿಬಾಲ್ ಪಂದ್ಯಾವಳಿಯು ಭಾರಿ ಅದ್ದೂರಿಯಾಗಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯನ್ನು ಯುವ ಉದ್ಯಮಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಧ್ಬುತ…
ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ
ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…