ಜಿಲ್ಲಾ ಸುದ್ದಿ:
ಅಮ್ಮನಘಟ್ಟ ಕಪ್ಪು ಬಾವುಟ ಪ್ರದರ್ಶನ ಪ್ರಕರಣ – ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ವಿರುದ್ದ ಪ್ರತಿಭಟನೆಯೇ ಹೊರತು ಶಾಸಕರ ವಿರುದ್ದವಲ್ಲ – ಚಿದಂಬರಂ ಸ್ಪಷ್ಟನೆ|black
ರಿಪ್ಪನ್ಪೇಟೆ : ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವಿರುದ್ದವೇ ಹೊರತು ಶಾಸಕರ ವಿರುದ್ದವಲ್ಲ ಎಂದು ಮಾರುತಿಪುರ ಗ್ರಾಪಂ ಅಧ್ಯಕ್ಷ ಎಚ್ ಬಿ ಚಿದಂಬರ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಚಿದಂಬರಂ ಬಳಿ ದೂರವಾಣಿ ಮೂಲಕ ಸ್ಪಷ್ಟನೆ ಕೇಳಿದಾಗ ಮಾತನಾಡಿದ ಅವರು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದು ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ…
ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ – ಹರತಾಳು ಹಾಲಪ್ಪ|halappa
ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಸಾಗರದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೀಡಿದ ಬಜರಂಗ ದಳದ ಮುಖಂಡ ಸುನೀಲ್ ಮೇಲೆ ಹಲ್ಲೆ ಯತ್ನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು 18 ಗಂಟೆಯಲ್ಲಿ ಬಂಧಿಸಿದ್ದಾರೆ. ಘಟನೆ ಖಂಡಿಸಿ ಇಂದು ಸಾಗರ ಬಂದ್ ಕೂಡ ಶಾಂತಿಯುತವಾಗಿ ಯಶಸ್ವಿಯಾಗಿದೆ. ಹಲ್ಲೆಗೆ ಕಾರಣ ಏನೇ ಆಗಿರಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಅಂಥವರ ವಿರುದ್ಧ…
ರಾಜ್ಯದ 224 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ದಿಸಲಿದೆ – ಭಾಸ್ಕರ್ ರಾವ್ | ರಿಪ್ಪನ್ಪೇಟೆಯಲ್ಲಿ ಬೃಹತ್ ಬೈಕ್ ರ್ಯಾಲಿ – ಸಮಾವೇಶ|AAP
ರಿಪ್ಪನ್ಪೇಟೆ : ರಾಜ್ಯದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ನಂತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು 10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೆಹಲಿ ಹಾಗೂ ಪಂಜಾಬ್ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು,…
ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara
ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…
ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt
ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…
ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane
ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…
ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja
ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…
ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕೋಮು ಗಲಾಟೆ – ನಾಲ್ವರಿಗೆ ಗಾಯ|crime
ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಅಪ್ರಾಪ್ತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಅನ್ಯಕೋಮಿನವರಿಂದ ಹಲ್ಲೆ ನಡೆದಿದೆ. ವೇಗವಾಗಿ ಹಾಗೂ ನಿರ್ಲಕ್ಷದಿಂದ…
ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident
ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….
ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan
2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್ಗಳ ಖರೀದಿಸಲು ಸಾಮಾನ್ಯ…