Headlines

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ  ಘಟನೆ ನಡೆದಿದೆ.  ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಈ  ಕಾರು ಸೇರಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿ, ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ- ಸಿಬ್ಬಂದಿ ಬೆಂಕಿಯನ್ನ ಆರಿಸಲು ಯತ್ನಿಸಿದ್ದಾರೆ.  ಕಾರಿನ…

Read More

ಜ.30 ರಂದು ಶಿರಾಳಕೊಪ್ಪ ಬಂದ್ ಗೆ ಹಿಂದೂ ಜಾಗರಣ ವೇದಿಕೆ ಕರೆ – ಬಂದ್ ವಿರೋಧಿಸಿ ಠಾಣೆ ಮುಂದೆ ಧರಣಿ ನಡೆಸಲು ಮುಂದಾದ ಅಂಜುಮನ್ ಇಸ್ಲಾಂ ಕಮಿಟಿ|

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಾಳೆ ಹಿಂದೂ ಜಾಗರಣಾ ವೇದಿಕೆ ಬಂದ್ಗೆ ಕರೆಕೊಟ್ಟಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಸಹ ನಡೆಸಿದೆ. ಜ.30ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಶಿರಾಳಕೊಪ್ಪ ಬಂದ್‌ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ. ಪೊಲೀಸರ ದೌರ್ಜನ್ಯ ಮತ್ತು ಶಿರಾಳಕೊಪ್ಪದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಿದ್ದು ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ)  ಶಿರಾಳಕೊಪ್ಪ ಬಂದ್ ಗೆ ಕರೆಕೊಟ್ಟಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಬಂದ್ ನಿಮಿತ್ತ ಸ್ವಯಂ ಘೋಷಿತ…

Read More

ರಿಪ್ಪನ್‌ಪೇಟೆ : ಸರ್ಕಾರಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಜೆಪಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಆರೋಪ – ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ವಸತಿಗೃಹದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ “ಭಾರತೀಯ ಜನತಾ ಪಕ್ಷ ಹೊಸನಗರ ಮಂಡಲ ಮಹಿಳಾ ಮೋರ್ಚ ವಿಜಯ ಸಂಕಲ್ಪ ಅಭಿಯಾನ ದಿನಾಂಕ 27 ರ ಶುಕ್ರವಾರ ರಿಪ್ಪನ್‌ಪೇಟೆಯ ಬಿಸಿಎಂ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಹಾಗೂ ಸುಮಾರು 31 ಸದಸ್ಯತ್ವ ನೋಂದಣಿ ಮಾಡಿಸಲಾಯಿತು” ಎಂಬ…

Read More

ಇಂದಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯ ನಿರ್ವಹಿಸಬೇಕಾಗಿದೆ – ಹರತಾಳು ಹಾಲಪ್ಪ|sagara

ಸಾಗರ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗಾಂಧಿ ಮೈದಾನದಲ್ಲಿ ಮಲೆನಾಡು ರಹಸ್ಯ ವಾರಪತ್ರಿಕೆ ,ಸುದ್ದಿಮನೆ ಹಾಗೂ ಗ್ಲೋಬಲ್ ಡಿಜಿಟಲ್ ಮೀಡಿಯಾ ಆಯೋಜಿಸಿದ್ದ ವಾರ್ಷಿಕ ಸಂಭ್ರಮಾ‍ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆಗಳನ್ನು…

Read More

ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More

ಜೈನ ಬೀಜಾಕ್ಷರಿ ಮಂತ್ರ ನಿತ್ಯ ಪಠಣದಿಂದ ಆನಂತ ಶಕ್ತಿ ವೃದ್ದಿ|hombuja

ರಿಪ್ಪನ್‌ಪೇಟೆ;- ಜೈನ ಬೀಜಾಕ್ಷರಿ ಮಂತ್ರವನ್ನು ನಿತ್ಯ ಪಠಣಮಾಡುವುದರಿಂದ  ನಮಗೆ ಎದುರಾಗಿರುವ ನೂರೆಂಟು ಸಮಸ್ಯೆಗಳು ಪರಿಹಾರವಾಗುವುದು ಎಂದು ರಾಷ್ಟ ಸಂತ ಅಚಾರ್ಯ 108 ಗುಣಧರನಂದಿ ಮುನಿಮಹಾರಾಜರು ಹೇಳಿದರು.   ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಶುಕ್ರವಾರ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅಶೀರ್ವಚನ ನೀಡಿ ಹೊಂಬುಜ ಜೈನಮಠದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವು ದೇವರಾಯ ಇಂದ್ರ ಸಾಕ್ಷಾತ್ಕಾರ ಮಾಡಿದಂತಾಗಿದ್ದು ಈ ಪುಣ್ಯ ಕಾರ್ಯ ಜನಮಾನಸದಲ್ಲಿ ನುರಾರು ವರ್ಷ ಕಾಲ ಉಳಿಯುವಂತಾಗಿದೆ…

Read More

ಮಕ್ಕಳು ಹೆಚ್ಚು ಪುಸ್ತಕಗಳನ್ನು ಓದುವಂತೆ ಪೋಷಕರು ಪ್ರೇರೇಪಿಸಬೇಕು – ಹಿರಿಯ ಪತ್ರಕರ್ತ ಪದ್ಮರಾಜ್ ದಂಡಾವತಿ|hombuja

ರಿಪ್ಪನ್‌ಪೇಟೆ : ಇಂದಿನ ಅಧುನಿಕ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ನಿರ್ಧಾರಗಳನ್ನು ದಿಢೀರ್ ತೆಗೆದುಕೊಂಡು ತಮ್ಮ ಜೀವನವನ್ನು ಕೊನೆಗಾಣಿಸುತ್ತಿರುವ ಯುವ ಸಮೂಹಕ್ಕೆ ಶ್ರೇಷ್ಠ ಗ್ರಂಥಗಳ ಅಧ್ಯಯನದ ಬಗ್ಗೆ ಜಾಗೃತಿಗೊಳಿಸುವುದು ಸಮಾಜದಲ್ಲಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಐದನೇ ದಿನವಾಗ ಗುರುವಾರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾನವನ ಬದುಕಿನಲ್ಲಿ ನೆಮ್ಮದಿ ಕಾಣಬೇಕಾದರೆ ಧಾರ್ಮಿಕ…

Read More

ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More

ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja

ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ  ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…

Read More