Headlines

ರಿಪ್ಪನ್‌ಪೇಟೆಯಲ್ಲಿ ನ.25,26 ರಂದು ಕಲಾಕೌಸ್ತುಭ ಕನ್ನಡ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-ನ.27ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ

ರಿಪ್ಪನ್‌ಪೇಟೆ : ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 29ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 25 ಮತ್ತು 26 ರಂದು ಭೂಫಾಳಂ ಸಭಾ ಭವನದಲ್ಲಿ ಹಾಗೂ ನವೆಂಬರ್ 27 ರಂದು ಸಂಜೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೇಗೌಡ ಕ್ರೀಡಾಂಗಣದಲ್ಲಿ “ಆಳ್ವಾಸ್‌ ಸಾಂಸ್ಕೃತಿಕ ವೈಭವ’’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಕಾರ್ಯದರ್ಶಿ ರವಿಚಂದ್ರ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಸಂಚಾಲಕ ಎನ್.ಸತೀಶ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 25…

Read More

ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ – ಓರ್ವ ವಶಕ್ಕೆ|Assault on doctor

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಯ ಕಡೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ ವ್ಯಕ್ತಿ ಮಮ್ತಕೀಮ್ ಎಂಬಾತನನ್ನು ದೊಡ್ಡಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಆಯನೂರಿನ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಶೀದ್ (65) ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ನಂತರ ಅವರನ್ನು ಮತ್ತೆ ಮೆಗ್ಗಾನ್ ಗೆ ದಾಖಲಿಸಿದ್ದರು ಆದರೆ ಭಾನುವಾರ ರಾತ್ರಿ ಅಬ್ದುಲ್ ರಶೀದ್…

Read More

ನಿದ್ದೆ ಬರುತ್ತಿಲ್ಲಾ ಎಂದು ಪೊಲೀಸ್ ಇಲಾಖೆಯ 112 ಗೆ ಕರೆ ಮಾಡಿದ ಭೂಪ – ಒಂದು ಗೊರಕೆಯ ಸ್ವಾರಸ್ಯಕರ ಕಥೆ!!! ಇಲ್ಲಿ ನೋಡಿ….

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಆಪತ್ಕಾಲದಲ್ಲಿ ಡಯಲ್ 112 ಹಾಗೂ 100 ಸೇವೆ ಒದಗಿಸಿದೆ.ಆದರೆ ಇಲ್ಲೊಬ್ಬ ಭೂಪ ರಾತ್ರಿ ನಿದ್ದೆ ಬರ್ತಿಲ್ಲಾ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಹೌದು, ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಮಾಳೂರು ಪಟ್ಟಣ ಈ ವಿಚಿತ್ರ ಪ್ರಕರಣಕ್ಕೆ ಸಾಕ್ಷಿಯಾಗಿದೆ. ‘ನಿದ್ದೆ ಬರ್ತಿಲ್ಲಾ ಸಾರ್..’ ಎಂದು ಮಧ್ಯರಾತ್ರಿ ತುರ್ತು ಸೇವೆ 112 ನಂಬರ್‌ಗೆ ಇಂಥದ್ದೊಂದು ಕರೆ ಬಂದಾಗ ಪೊಲೀಸರು ತಲೆ ಚಚ್ಚಿಕೊಳ್ಳುವುದೊಂದೇ ಬಾಕಿ….

Read More

ಕನ್ನಡ ಭಾಷೆಗೆ ಮಡಿವಂತಿಕೆಯ ಬೇಲಿ ಬೇಡ – ಸರ್ಫ಼್ರಾಜ್ ಚಂದ್ರಗುತ್ತಿ|Ripponpet

ರಿಪ್ಪನ್‌ಪೇಟೆ : ಇಡೀ ಜಗತ್ತಿನಲ್ಲಿ ಕನ್ನಡ ತೆರೆದುಕೊಳ್ಳಬೇಕಾದರೆ ಕನ್ನಡಕ್ಕೆ ಮಡಿವಂತಿಕೆಯ ಬೇಲಿ ಬೇಡ ಎಂದು ಸಾಹಿತಿಗಳು ಹಾಗೂ ಉಪನ್ಯಾಸಕರಾದ ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು. ಪಟ್ಟಣದಲ್ಲಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ರಿಪ್ಪನ್ ಪೇಟೆ ರೋಟರಿ ಕ್ಲಬ್ ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರಸ್ತುತ ಆಧುನಿಕ ಕಾಲದಲ್ಲಿ ಸಂಶೋಧನೆ, ವೈದ್ಯಕೀಯ ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಸರಳವಾಗಿ ಬಳಸುವಂತಾಗಬೇಕು. ಹೊಸ ಕಾಲಕ್ಕೆ ಕನ್ನಡ ಕಟ್ಟುವ ಕೆಲಸವಾಗಬೇಕು,ಕನ್ನಡ ಭಾಷೆಯಲ್ಲಿ…

Read More

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More

ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More