Headlines

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|Ripponpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ್    ಅವರು ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಹೆಗ್ಗೂಡಿನ ಮಹಿಳೆಯರ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಮಹಿಳೆಯರ ವೀರಗಾಸೆ ನೃತ್ಯ, …

Read More

ನವೆಂಬರ 6ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ|ದೀಪೋತ್ಸವದ ಅಂಗವಾಗಿ ಭಕ್ತರಿಂದ ಮಠದ ಸ್ವಚ್ಚತಾ ಅಭಿಯಾನ|Malalimatt

ನವೆಂಬರ್ 6 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಳಲಿ‌ಮಠ ಮಹಾಸಂಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜಿಗಳು ತಿಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಮಾನವ ಜೀವನದಲ್ಲಿ ಕತ್ತಲೆ ಬೆಳಕಿನಂತೆ ಸುಖ ದುಃಖಗಳು ಶಾಶ್ವತವಲ್ಲ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಲು ಆಧ್ಯಾತ್ಮದ ಬೆಳಕು ಮಾನವನಿಗೆ ಅನಿವಾರ್ಯವಾಗುತ್ತದೆ ಎಂದರು. ನವೆಂಬರ್ 06 ಭಾನುವಾರದಂದು ರಂದು ನಡೆಯುವ ಕಾರ್ತೀಕ ದೀಪೋತ್ಸವ ಹಾಗೂ…

Read More

ರಿಪ್ಪನ್‌ಪೇಟೆ : ಒಂಟಿ ಸಲಗನ ದಾಳಿಗೆ ಕಂಗಾಲಾದ ರೈತರು|Wild

ರಿಪ್ಪನ್‌ಪೇಟೆ : ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬೆಳ್ಳೂರು ಗ್ರಾಮ ಪಂಚಾಯ್ತಿಯ ಹಲವು ಗ್ರಾಮಗಳಲ್ಲಿ ಒಂಟಿ ಸಲಗನ ದಾಳಿಯಿಂದಾಗಿ ಭತ್ತ ಅಡಿಕೆ ತೋಟ ದ್ವಂಸಗೊಂಡಿದ್ದು ರೈತರನ್ನು ಕಂಗಾಲಾಗಿಸಿದೆ.   ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಬ್ಬಿಗಾ ಗುಳಿಗುಳಿಶಂಕರದ ಅವಡೆ ಶಿವಪ್ಪ ಎಂಬುವರ ಭತ್ತದ ಗದ್ದೆ ಹಾಗೂ ಕಳಸೆ ಗಂಗಾಧರಗೌಡ ದೇವೇಂದ್ರಪ್ಪಗೌಡರ ಅಡಿಕೆ ತೋಟದಲ್ಲಿ ಬೃಹತ್ ಗಾತ್ರದ ಮರಗಳನ್ನು ದ್ವಂಸಗೊಳಿಸಿದ್ದು ರೈತರಲ್ಲಿ ಭಯ ಬೀತರನ್ನಾಗಿದೆ.  ಸಿರಿಗೆರೆ ಮತ್ತು ಮೂಗುಡ್ತಿ ವನ್ಯಜೀವಿ ವಿಭಾಗದ ಅರಣ್ಯ ವ್ಯಾಪ್ತಿಗೆ ಬರುವ ಕಳಸೆ ನರ‍್ಲಿಗೆ ಬೆಳ್ಳೊರು ಗುಬ್ಬಿಗಾ,ಗುಳುಗುಳಿ…

Read More

ಕೊನೆಗೂ ಬೋನಿಗೆ ಬಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನತೆ|theleopard

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ. ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ…

Read More

ರಿಪ್ಪನ್‌ಪೇಟೆ : ಹಿಂದೂ ಮಹಸಭಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನಕ್ಕೆ ಶ್ರದ್ದಾಂಜಲಿ|Ripponpet

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಒಂದು ವರ್ಷ|punith

ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಒಂದು ವರ್ಷ. ಕಳೆದ ವರ್ಷ ಅಕ್ಟೋಬರ್ 29ರಂದು ಇಡೀ ಕರುನಾಡು ಕಣ್ಣೀರಿಟ್ಟಿತ್ತು. ನಿನ್ನೆಯಷ್ಟೇ ಪುನೀತ್ ಕಟ್ಟಕಡೆಯ ಸಿನಿ-ಡಾಕ್ಯುಮೆಂಟರಿ ಅಥವಾ ಡಾಕ್ಯು-ಡ್ರಾಮಾ ಗಂಧದ ಗುಡಿ ರಿಲೀಸ್ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ…

Read More

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More

ಮಿದುಳು ನಿಷ್ಕ್ರಿಯಗೊಂಡು ಏಳು ವರ್ಷದ ಬಾಲಕ ಸಾವು : ನೇತ್ರದಾನ ಮಾಡಿ ಉದಾರತೆ ಮೆರೆದ ಪೋಷಕರು|Eyedonate

ರಿಪ್ಪನ್ ಪೇಟೆ : ಏಳು ವರ್ಷದ ಮಗುವಿನ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಮಗನನ್ನು ಬದುಕಿಸುವುದಕ್ಕೆ ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಮೆದುಳು ನಿಷ್ಕ್ರೀಯಗೊಂಡ ಬಳಿಕ ಬಾಲಕ ಸಾವಿನ ಮನೆಯ ಅಂಚು ತಲುಪಿಯಾಗಿತ್ತು. ಎತ್ತಿ ಮುದ್ದಾಡಿ ಸಾಕಿ ಸಲುಹಿದ ಪುಟ್ಟ ಮಗನ ಸಾವಿನ ನೋವಿನ ನಡುವೆಯೂ ಪೋಷಕರು ಆತನ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನ ನೋವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ಹೌದು…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More