
ಜಿಲ್ಲಾ ಸುದ್ದಿ:
ಖ್ಯಾತ ಅಂಕಣಕಾರ,ಲೇಖಕ ಕೆ ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆ :
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು. ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ…
ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ
ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ. ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…
ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್ ಕಿತ್ತವನಿಗೆ ಬಿತ್ತು ಗೂಸಾ
ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್ ರಾಜಕುಮಾರ್ ಅವರ ಬೃಹತ್ ಫ್ಲೆಕ್ಸ್ ಹಾಕಲಾಗಿತ್ತು. ಈ ವೇಳೆ ಆನಂದ್ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್ರ ಫ್ಲೆಕ್ಸ್ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….
ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :
ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…
ಅಂದಾಸುರದ ಮೇಲಿನಕೇರಿ ವೃತ್ತಕ್ಕೆ ಪುನೀತ್ ರಾಜ್ಕುಮಾರ್ ಹೆಸರಿಟ್ಟು ಗೌರವ ಸೂಚಿಸಿದ ಗ್ರಾಮಸ್ಥರು :
ಅಂದಾಸುರ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಅಂದಾಸುರ ಮೇಲಿನ ಕೇರಿಗೆ ವೃತ್ತಕ್ಕೆ ಪುನೀತ್ ರಾಜ್ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಅಂದಾಸುರದ ಓಂ ಫ್ರೆಂಡ್ಸ್ ಯುವಕ ಸಂಘದವರು ಇಲ್ಲಿನ ಮೇಲಿನಕೇರಿಯ ವೃತ್ತಕ್ಕೆ ಪುನೀತ್ ರಾಜಕುಮಾರ್ ವೃತ್ತ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಈ ಸಂಧರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಖೈರಾ ಅಧ್ಯಕ್ಷರಾದ ರಾಜಣ್ಣ ,ಸೋಮೇಶ ಗ್ರಾಪಂ ಸದಸ್ಯರು ಆಚಾಪುರ,ಶಿಕ್ಷಕರಾದ ಇಂದಿರಾ,ವಕೀಲರಾದ ದಾಸನಕೊಪ್ಪ ವಾಸು,ವೀಣಾ ಹಾಗೂ ಗ್ರಾಮಸ್ಥರೆಲ್ಲಾ ಉಪಸ್ಥಿತರಿದ್ದರು….
ಬಟ್ಟೆಮಲ್ಲಪ ಕರವೇ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪುನೀತ್ ರಾಜ್ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ :
ಕರ್ನಾಟಕ ರಕ್ಷಣಾ ವೇದಿಕೆ ಬಟ್ಟೆಮಲ್ಲಪ್ಪ ಘಟಕದಿಂದ ರಿಪ್ಪನ್ ಪೇಟೆ ಕುಕ್ಕಳಲೆ ಸಂಪರ್ಕ ರಸ್ತೆಗೆ ಅಳವಡಿಸಿದ್ದ ಕನ್ನಡದ ಮೇರು ನಟ ಪುನೀತ್ ರಾಜಕುಮಾರ ನಾಮಫಲಕಕ್ಕೆ ಮಸಿ ಬಳಿದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶಾಂತಿಯುತ ಹೋರಾಟವನ್ನು ನಡೆಸಲಾಯಿತು. ಪುನೀತ್ ನಾಮಫ಼ಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಈ ಸಂಧರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಹೆಚ್ ಆರ್ ರಾಘವೇಂದ್ರ. ಘಟಕದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಾಗರಾಜ್…
ಲಾರಿ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು
ಭದ್ರಾವತಿ : ಕಾರೇಹಳ್ಳಿಯ ತಾಳೇ ಎಣ್ಣೆಯ ಫ್ಯಾಕ್ಟರಿ ಬಳಿ ಲಾರಿ ಮತ್ತು ಬೈಕ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸಾವು ಕಂಡಿರುವ ಘಟನೆ ನಡೆದಿದೆ. ಕಾರೇಹಳ್ಳಿ ಫ್ಯಾಕ್ಟರಿಯ ಬಳಿ KA-17-B-6710 ಕ್ರಮ ಸಂಖ್ಯೆಯ ಲಾರಿಯೊಂದು ಬೈಕ್ ಸವಾರನಿಗೆ ಗುದ್ದಿದೆ. ಬೈಕ್ ಸವಾರ ಗಾಯಗೊಂಡು ಬಿದ್ದಿದ್ದಾನೆ. ಹಿಂಬದಿಯಲ್ಲಿ ಬರುತ್ತಿದ್ದ ಸ್ಟೀಫನ್ ಕ್ರಿಸ್ಟೋಫರ್ ಎಂಬ ಚರ್ಚ್ ನ ಫಾದರ್ ಅವರನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಆನಂದ ಕುಮಾರ್ ಎಂದು ಗುರುತಿಸಲಾಗಿದ್ದು. ಅವರಿಗೆ ಹೆಚ್ಚಿನ…
ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣಹಚ್ಚಿದ ಪ್ರಕರಣ: ಕರವೇ ಹಾಗೂ ಕಸ್ತೂರಿ ಕನ್ನಡ ಸಂಘದಿಂದ ಭಾರಿ ಪ್ರತಿಭಟನೆ
ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ…
ಪುನೀತ್ ರಾಜಕುಮಾರ್ ನಾಮಫಲಕವನ್ನು ಅಳಿಸಿದ ಕಿಡಿಗೇಡಿಗಳು:: ಕಿಡಿಗೇಡಿಗಳ ಬಂಧನಕ್ಕೆ ಕಸ್ತೂರಿ ಕನ್ನಡ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಯ :
ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು. ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ. ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ : ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್…
ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ
ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ ಹಲವಾರು…