ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet
ರಿಪ್ಪನ್ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….
ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ ಕಾರ್ಯ|Heddaripura
ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…
ರಿಪ್ಪನ್ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ
ರಿಪ್ಪನ್ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…
ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…
ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit
ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…
ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha
ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…
ರಿಪ್ಪನ್ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa
ರಿಪ್ಪನ್ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…
ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga
ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…
ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale
ರಿಪ್ಪನ್ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…
ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru
ರಿಪ್ಪನ್ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…