Headlines

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.  ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ರಿಪ್ಪನ್‌ಪೇಟೆ : ಶಾಲೆಯ ಮೇಲೆ ಉರುಳಿಬಿದ್ದ ಬೃಹತ್ ಮರ – ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮಳವಳ್ಳಿ ಗ್ರಾಮದಲ್ಲಿ ಶಾಲಾ ಸಮಯದಲ್ಲೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲೆ ಭಾರಿ ಮರವೊಂದು ಉರುಳಿಬಿದ್ದರೂ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶಾಲೆಯ ಪಕ್ಕದಲ್ಲಿದ್ದ ದೊಡ್ಡಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶಾಲೆಯ ಎರಡು ಛಾವಣಿ ಸಂಪೂರ್ಣ ಹಾನಿಯಾಗಿದೆ. ಇಂದು ಮೂಗೂಡ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದಿದ್ದ ಎಲ್ಲಾ ಮಕ್ಕಳನ್ನು ಬೆಳಿಗ್ಗೆ 9.30 ರ ಸಮಯಕ್ಕೆ ಮೂಗೂಡ್ತಿ…

Read More

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More