Headlines

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ ನಾಳೆ(10-09-2022) ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದೆ.ಈ ಬಾರಿ ಅದ್ದೂರಿ ಮೆರವಣಿಗೆಗೆ ಸಿದ್ದತೆ ನಡೆಸಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ನಾಳೆ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಕಲಾ ತಂಡಗಳು,ಮಂಗಳವಾದ್ಯ,ಚಂಡೇಮೇಳ ,ಡೊಳ್ಳು ಕುಣಿತ ,ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾ…

Read More

ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…

Read More

ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :

ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದ  ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು  ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ,      ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಅಡ್ಡೇರಿ ಮಚಲಿ ಜಡ್ಡು  ಸಂಪರ್ಕ ರಸ್ತೆಯ  ದುಸ್ಥಿತಿ ಕಣ್ಣಾರೆ ಕಂಡರು. ಮಳೆ…

Read More

ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ

 ‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’  ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…

Read More

ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ

ಭದ್ರಾವತಿ :  ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ  ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ  ವೇಳೆಗೆ ರಂಗಪ್ಪ ವೃತ್ತ ತಲುಪಿತು.    ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು  ವಿತರಣೆ ಜೊತೆಗೆ…

Read More

395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…

Read More

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

ಬಿಜೆಪಿ ಪಕ್ಷದ ದೃಷ್ಟಿಯಲ್ಲಿ ದಲಿತರು ಹಿಂದೂಗಳಲ್ಲವೇ : ಕಿಮ್ಮನೆ ರತ್ನಾಕರ್ ಪ್ರಶ್ನೆ

ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರ ಜೊತೆ ಒಟ್ಟಾಗಿ ಹೋಗುತ್ತೇವೆ ಎಂದು ಹೇಳುವ ಕಾರಣಕ್ಕೆ ಜನ ನಂಬದೆ ಇರಬಹುದು ಆದರೆ ಬಿಜೆಪಿ ಪಕ್ಷ ನಮಗೆ ಆ ಸಮುದಾಯದ ಮತವೇ ಬೇಡ ಎಂದು ಹೇಳುತ್ತಾರೆ ಇದರಿಂದಾಗಿ ಕೋಮು ಗಲಭೆ ಹೆಚ್ಚುವುದಿಲ್ಲವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನಿಸಿದ್ದಾರೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಹೋರಾಟ ಮಾಡುತ್ತಾರೆ ಈದ್ಗಾ ಮೈದಾನದಲ್ಲಿ ಗಣಪತಿ ವಿಚಾರಕ್ಕೆ ಹೋರಾಟ ಮಾಡ್ತಾರೆ ಅದರ ಅವಶ್ಯಕತೆ…

Read More

ಸೆ.11,12ಕ್ಕೆ ಕೋಣಂದೂರಿನ ಬೃಹನ್ಮಠದ ಸಮುದಾಯ ಭವನ ಲೋಕಾರ್ಪಣೆ ಮತ್ತು ಗುರುವಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ;-ಕೋಣಂದೂರು ಬೃಹನ್ಮಠದಲ್ಲಿ ಸುಮಾರು 3 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶ್ರೀಶಿವಲಿಂಗೇಶ್ವರ ಸಮುದಾಯ ಭವನ ಲೋಕಾರ್ಪಣಿ ಮತ್ತು ಶ್ರೀಶೈಲ ಜಗದ್ಗುರುಗಳ ಪಟ್ಟಾಧಿಕಾರದ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಸನ್ನಿಧಿಯವರ ಐವತ್ತನೇ ವರ್ಷದ ಅಂಗವಾಗಿ ತುಲಾಭಾರ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಅಯೋಜಿಸಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ  ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೆ.11 ರಂದು ಸಂಜೆ ಶ್ರೀಶಿವಲಿಂಗೇಶ್ವರ…

Read More

ಹಡ್ಲುಬೈಲು ಮನೆ ತೆರವು ಪ್ರಕರಣ : ಅಧಿಕಾರಿಗಳ ದುಂಡಾವರ್ತನೆ ನಡೆಗೆ – ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಪಾದಯಾತ್ರೆ

ರಿಪ್ಪನ್ ಪೇಟೆ ; ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹಡ್ಲುಬೈಲಿನ ಜೀವನ್ ಎಂಬವರ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ದುಂಡಾವರ್ತನೆಯನ್ನು ಖಂಡಿಸಿ ಮಂಗಳವಾರ ಕೆಪಿಸಿಸಿ ವಕ್ತಾರ ಹಾಗೂ  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಮ್ಮ ನೂರಾರು  ಬೆಂಬಲಿಗರೊಂದಿಗೆ ಮನೆ  ನೆಲಸಮಗೊಂಡ ಜಾಗದಿಂದ  ಹೊಂಬುಜ ನಾಡ ಕಚೇರಿಯವರೆಗೆ ಸುಮಾರು 7ಕಿಲೋ ಮೀಟರ್ (ನಡಿಗೆ ) ಪಾದಯಾತ್ರೆ ನಡೆಸಿದರು.    ತದ ನಂತರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು  ರಾಜ್ಯ ಸರ್ಕಾರ ನಿವೇಶನ…

Read More