Headlines

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…

Read More

ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು – ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ : ರಾಜ್ಯಾದ್ಯಂತ ಗೃಹಸಚಿವರ ಮೇಲೆ ಬಹುದೊಡ್ಡ ಸೈಟ್ ಹಗರಣದ ಆಪಾದನೆ ಇದೆ. ಆರಗ ಜ್ಞಾನೇಂದ್ರರವರು ಬೆಂಗಳೂರಿನಲ್ಲಿ ಅಕ್ರಮವಾಗಿ 50 ಕೋಟಿ ಸೈಟ್ ತಾವು ತೆಗೆದುಕೊಂಡು ಅಧಿಕಾರಿಗಳನ್ನು ಮನೆಗೆ ಹೋಗುವ ಹಾಗೆ ಮಾಡಿದ್ದಾರೆ. ಹೈಕೋರ್ಟ್ ಕೂಡ ಈ ವಿಚಾರವಾಗಿ ಇವರ ಕಪಾಳಕ್ಕೆ ಹೊಡೆದಿದ್ದಾರೆ. ಹಾಗಾಗಿ ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ರಾಜೀನಾಮೆ ಕೊಡಬೇಕು ಎಂದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಆಗಿನ ಕಾಲದಲ್ಲಿ ಕಡಿದಾಳ್ ಮಂಜಪ್ಪನವರಿಗೆ ಸೈಟ್ ಕೊಡಲು ಹೋದಾಗಲೇ ಅದನ್ನು ತಿರಸ್ಕಾರ…

Read More

ಸ್ಮಶಾನದ ಜಾಗ ಒತ್ತುವರಿ : ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಸೊರಬ : ಸರ್ಕಾರದಿಂದ ಮಂಜೂರಾದ ರುದ್ರಭೂಮಿಯನ್ನು ಅತಿಕ್ರಮಣಕಾರರಿಂದ ತೆರವುಗೊಳಿಸುವಂತೆ ಒತ್ತಾಯಿಸಿ ಊರಿನ ಗ್ರಾಮಸ್ಥರೆಲ್ಲಾ ಸೇರಿ ಮೃತದೇಹವನ್ನು ಇಟ್ಟು ಸೊರಬ ಮುಖ್ಯ ರಸ್ತೆಯಲ್ಲಿ ಪ್ರತಿಭಟಿಸಿದ ಘಟನೆ ನಡೆದಿದೆ. ತಾಲೂಕಿನ ಹೆಚ್ಚೆ ಗ್ರಾಮದಲ್ಲಿ ಮಂಜೂರಾದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಿ ಗಡಿ ಗುರುತಿಸುವಂತೆ ಹತ್ತಾರು ಬಾರಿ ಮನವಿ ನೀಡಿದರೂ ಸಂಬಂಧಪಟ್ಟವರು  ಸ್ಪಂದಿಸಿಲ್ಲ ಹಾಗಾಗಿ ಈ ದಿನ ಹೆಚ್ಚೆ ಊರಿನಲ್ಲಿ ನಿಧನರಾದವರ ಮೃತದೇಹವನ್ನು ಸೊರಬ ಪಟ್ಟಣಕ್ಕೆ ತಂದು ಪ್ರತಿಭಟಿಸಿದ್ದಾರೆ. ಸರ್ಕಾರದಿಂದ 4 ಎಕರೆ ಜಾಗ ಮಂಜೂರಾಗಿದೆ ಆದರೆ…

Read More

ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More

ಅವಧೂತ ವಿನಯ್ ಗುರೂಜಿ ಜನ್ಮ ದಿನೋತ್ಸವದ ಅಂಗವಾಗಿ ನಡೆದ ರಕ್ತದಾನ ಶಿಬಿರ ಯಶಸ್ವಿ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಡಿವೈಎಸ್ಪಿ ಶಾಂತವೀರ ಉದ್ಘಾಟನೆ ಮಾಡಿದರು. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದ, ಪುನೀತ್ ಬ್ರಿಗೇಡ್, ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮ ಸಂಸ್ಥೆ, ರೋಟರಿ ಬ್ಲಡ್ ಬ್ಯಾಂಕ್, ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿ ಸಹಯೋಗದಲ್ಲಿ ನಡೆದ ರಕ್ತದಾನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೂಡ ಭಾಗವಹಿಸಿ ರಕ್ತದಾನಿಗಳಿಗೆ ಶುಭ ಕೋರಿದರು….

Read More

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕವು ಅಸ್ತಿತ್ವಕ್ಕೆ

ಸೊರಬ : ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕವು ಅಸ್ತಿತ್ವಕ್ಕೆ ಬಂದಿದೆ. ಸೊರಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರಾಘವೇಂದ್ರ ಟಿ., ಉಪಾಧ್ಯಕ್ಷರಾಗಿ ಹೊಸ ದಿಗಂತ ಪತ್ರಿಕೆ ವರದಿಗಾರ ಮಹೇಶ್ ಗೋಖಲೆ, ಪ್ರಧಾನ ಕಾರ್ಯದರ್ಶಿಯಾಗಿ ಮಲೆನಾಡು ಮಿತ್ರ ಪತ್ರಿಕೆ ವರದಿಗಾರ ದಿನಕರ್ ಬಾವೆ, ಕಾರ್ಯದರ್ಶಿಯಾಗಿ ಕ್ರಾಂತಿದೀಪ ವರದಿಗಾರ ನೂಪಿ ಶಂಕರ್, ಖಜಾಂಚಿಯಾಗಿ ಕನ್ನಡಪ್ರಭ ವರದಿಗಾರ ಹೆಚ್.ಕೆ.ಬಿ. ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಶ್ರೀಪಾದ ಬಿಚ್ಚುಗತ್ತಿ ಅವರು…

Read More

ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಯ ಕುರಿತು ಅನಾಮಧೇಯ ಪತ್ರ ಪ್ರಕರಣಕ್ಕೆ ಟ್ವಿಸ್ಟ್ : ಆಕೆಗಾಗಿ ಲೆಟರ್ ಬರೆದವ ಈಗ ಪೊಲೀಸರ ಅತಿಥಿ

ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ.. ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More