ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’: ಹರತಾಳು ಹಾಲಪ್ಪ.
ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ತಿರಂಗಾ’ ಕಾರ್ಯಕ್ರಮದಡಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಎಂ ಎಸ್ ಐ ಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ ಕರೆ ನೀಡಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪಟ್ಟಣದ ಹಿಂದೂ ಮಹಾಸಭಾ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ಹಾರಿಸುವ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ…
ಅದ್ದೂರಿಯಾಗಿ ಜರುಗಿದ ನಾಗರಹಳ್ಳಿ ಜಾತ್ರಾ ಮಹೋತ್ಸವ :
ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ. ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ…
ಮಾನವೀಯತೆ ಮೆರೆದ ಗೃಹಸಚಿವ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ : ಪಟ್ಟಣದಲ್ಲಿ ನೆಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಬೆಂಗಳೂರು ಪ್ರಯಾಣದಲ್ಲಿ ಇದ್ದ ಗೃಹಸಚಿವ ಆರಗ ಜ್ಞಾನೇಂದ್ರರವರು ದಾರಿಯ ಮದ್ಯೆ ಮುತ್ತಿನಕೊಪ್ಪ ಬಳಿ ತೆರಳುತ್ತಿದ್ದಾಗ ರಸ್ತೆಯ ಮದ್ಯೆ ಕಾರು ಮತ್ತು ಬೈಕ್ ಅಪಘಾತ ದಲ್ಲಿ ಗಾಯಗೊಂಡ ದಂಪತಿಗಳನ್ನು ಸಂತೈಸಿ ಅವರಿಗೆ ಧೈರ್ಯ ತುಂಬಿ ಸಮೀಪದ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿಸಲು ಎಲ್ಲಾ ವ್ಯವಸ್ಥೆ ಮಾಡಿ ನಂತರ ಬೆಂಗಳೂರಿನತ್ತ ಪ್ರಯಾಣ ಮಾಡಿದರು. ಅಪಘಾತದಲ್ಲಿ ದಂಪತಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗೃಹಸಚಿವರ…
ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರೈತ ಮಿತ್ರ ಕಾರ್ಯಕ್ರಮ : ರೈತರು ದೇಶದ ಅನ್ನದಾತರು, ಪ್ರತಿಯೊಬ್ಬ ನಾಗರಿಕರು ರೈತರನ್ನು ಗೌರವಿಸಬೇಕು : ಪ್ರಮೀಳಾ ಎಲ್ ಗೌಡ.
ರಿಪ್ಪನ್ ಪೇಟೆ : ದೇಶದ ಅಭಿವೃದ್ಧಿಗಾಗಿ ಹಾಗೂ ನಾಗರಿಕರ ಆಹಾರಕ್ಕಾಗಿ ರೈತರುಗಳು ಹಗಲಿರಲು ದುಡಿಯುತ್ತಿರುತ್ತಾರೆ. ರೈತರಗಳು ದೇಶಕ್ಕೆ ಅನ್ನ ನೀಡುವ ಅನ್ನದಾತರು ಅವರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ಪ್ರಮೀಳಾ ಎಲ್ ಗೌಡ ಹೇಳಿದರು. ಪಟ್ಟಣದಲ್ಲಿ ರೈತ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಾಳಿ, ಮಳೆ, ಚಳಿ, ಬಿಸಿಲು ಇವುಗಳನ್ನು ಲೆಕ್ಕಿಸದೆ ಹಗಲಿರಲು ದೇಶದ ಒಳಿತಿಗಾಗಿ ಮತ್ತು ನಾಗರಿಕರ ಅಭಿವೃದ್ಧಿಗಾಗಿ ರೈತರು ಶ್ರಮವಹಿಸುತ್ತಾ ದುಡಿಯುತ್ತಾರೆ ಅವರುಗಳನ್ನು ಗೌರವಿಸುವುದು ಮತ್ತು…
ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ
ರಿಪ್ಪನ್ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….
ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????
ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…
ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ
ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ. ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….
“ಬಿಡುಗಡೆ” ಕನ್ನಡ ಕಿರುಚಿತ್ರ ಚಿತ್ರೀಕರಣಕ್ಕೆ ಚಾಲನೆ :
“ಬಿಡುಗಡೆ” ಎಂಬ ನೂತನ ಕಿರುಚಿತ್ರದ ಮಹೂರ್ತವನ್ನು ಖ್ಯಾತ ಉದ್ಯಮಿ ವಿನೋದ್ರವರು ಶಿವಮೊಗ್ಗ ಗ್ರಾಮಾಂತರ ಪ್ರದೇಶವಾದ ಸಿದ್ದರಹಳ್ಳಿಯಲ್ಲಿ ನೆರವೇರಿಸಿದರು. ನೂತನ ಕಿರುಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಲೆನಾಡು ಕಲೆಗೆ ಗೌರವ ಪ್ರಾಧಾನ್ಯತೆ ಕೊಟ್ಟ ತವರೂರು, ಅನೇಕ ಕಲಾ ಕೊಡುಗೆಯನ್ನು ನಾಡಿಗೆ ಕೊಟ್ಟಿದೆ, ಈ ನಿಟ್ಟಿನಲ್ಲಿ ಇಂದು ಮೊದಲ ಭಾರಿಗೆ ಕಿರುಚಿತ್ರದ ಚಿತ್ರಮಹೂರ್ತಕ್ಕೆ ಚಾಲನೆ ನೀಡುವ ಸೌಭಾಗ್ಯ ಲಭಿಸಿದೆ, ಉತ್ತಮ ಸಂದೇಶವನ್ನು ಸಾಮಾಜಿಕವಾಗಿ ನೀಡುವ ಚಿತ್ರತಂಡದ ಪಯತ್ನಕ್ಕೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೊದಲ…
ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ : ಮುತ್ತಿಗೆ ಹಾಕಿದವರು ನಮ್ಮವರೇ ಎಂದ ಆರಗ ಜ್ಞಾನೇಂದ್ರ
ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು…
ಮಾಜಿ ಶಾಸಕ ಬಿ ಸ್ವಾಮಿರಾವ್ ರವರಿಗೆ ಡಿ.ದೇವರಾಜ್ ಅರಸು ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರಿಗೆ ಮನವಿ :
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ರವರ ಜನ್ಮ ದಿನದ ಅಂಗವಾಗಿ ನೀಡುವ ಡಿ. ದೇವರಾಜ ಅರಸು 2021-22 ರ ಸಾಲಿನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರಾದ ಬಿ. ಸ್ವಾಮಿರಾವ್ ರವರಿಗೆ ನೀಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ…